Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ: ಮಾಜಿ‌ ಸಿಎಂ ಬಿಎಸ್‌ವೈ ಬಂಧನ ಸಾಧ್ಯತೆ, ಇದು ಸರ್ಕಾರದ ಷಡ್ಯಂತ್ರವಾ?
ಕರ್ನಾಟಕ

ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ: ಮಾಜಿ‌ ಸಿಎಂ ಬಿಎಸ್‌ವೈ ಬಂಧನ ಸಾಧ್ಯತೆ, ಇದು ಸರ್ಕಾರದ ಷಡ್ಯಂತ್ರವಾ?

Share
2 Min Read
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಮುಖಂಡ ಬಿಎಸ್‌ ಯಡಿಯೂರಪ್ಪ ಅವರನ್ನು ಅಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ಮಂಗಳವಾರ ದಿಢೀರ್‌ ನೋಟಿಸ್‌ ನೀಡಿ, ಬುಧವಾರ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಬಿಎಸ್‌ವೈ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಪ್ರಕರಣದ ರದ್ದತಿ ಕೋರಿದ್ದರು. ಇದೇ ವೇಳೆ, ಹೈಕೋರ್ಟ್‌ನಲ್ಲಿ ಈ ಸಂಬಂಧ ರಿಟ್ ಸಲ್ಲಿಕೆಯಾಗಿದೆ. ಯಡಿಯೂರಪ್ಪ ಅವರನ್ನು ಅರೆಸ್ಟ್‌ ಮಾಡುವಂತೆ ಹೈಕೋರ್ಟ್‌ನಲ್ಲಿ ಸಂತ್ರಸ್ತೆ ಕುಟುಂಬ ಮನವಿ ಮಾಡಿದೆ.


ತುಮಕೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಪರಮೇಶ್ವರ್, ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯಯಿದೆ ಎಂದು ಹೇಳಿದ್ದಾರೆ.


ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್‌ 14ರಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ತನ್ನ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಫೆಬ್ರವರಿ 2ರಂದು ಡಾಲರ್ಸ್‌ ಕಾಲೊನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಲಾಗಿತ್ತು. ಇದರ ಪ್ರಕಾರ, ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ಮಾಡಲು ಡಿಜಿಪಿ ಅಲೋಕ್‌ ಮೋಹನ್‌ ಆದೇಶಿಸಿದ್ದರು.


ಮಹಿಳೆ ಇದೇ ರೀತಿ ಸುಮಾರು 53 ಗಣ್ಯರ ವಿರುದ್ಧ ದೂರು ನೀಡಿದ್ದರು. ಹೀಗಾಗಿ, ಇದು ಸುಳ್ಳು ದೂರು ಆಗಿರಬಹುದು ಎಂಬ ವಾದಗಳೂ ಕೇಳಿಬಂದಿದ್ದವು. ಇದೇ ಕಾರಣಕ್ಕೆ ಈ ಪ್ರಕರಣವನ್ನು ಬಿಎಸ್‌ ಯಡಿಯೂರಪ್ಪ ನಿರ್ಲಕ್ಷಿಸಿದ್ದರು.
ಮಹಿಳೆ ಸಾವು:


81 ವರ್ಷದ ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಮಹಿಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಈ ಮಹಿಳೆ ಬೆಂಗಳೂರಿನ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಲ್ಲಿಗೆ ಈ ಪ್ರಕರಣ ಕ್ಲೋಸ್‌ ಆಯಿತೆಂದೇ ಎಲ್ಲರೂ ಭಾವಿಸಿದ್ದರು.


ಆದರೆ, ಡಿಢೀರ್‌ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರಿಗೆ ಸಿಐಡಿ ಪೊಲೀಸರು ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಇದೀಗ ಇವರ ಬಂಧನಕ್ಕೆ ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳುತ್ತಿವೆ.


ಫಲಿತಾಂಶದ ನಂತರ ಈ ದಿಢೀರ್ ಬೆಳವಣಿಗೆ ನಡೆದಿದ್ದು, ಇದು ರಾಜಕೀಯ ಪ್ರೇರಿತವಾಗಿರಬಹುದು ಎಂಬ ವಾದವೂ ಕೇಳಿಬರುತ್ತಿದೆ. ದೂರು ನೀಡಿದ ಇಷ್ಟು ಸಮಯದ ಬಳಿಕ ಯಾಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಳೆದ ಮೂರು ತಿಂಗಳು ಪೊಲೀಸರು ಏಕೆ ಸುಮ್ಮನಿದ್ದರು? ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶದ ಹಿನ್ನಡೆಯ ಬಳಿಕ ಈ ರೀತಿ ಯಾಕೆ ಮಾಡಲಾಗುತ್ತಿದೆ? ಎಂದೆಲ್ಲ ವಿಶ್ಲೇಷಿಸಲಾಗುತ್ತಿದೆ. ಸಂತ್ರಸ್ತೆಯ ತಾಯಿಯನ್ನು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಹೇಳಿಕೆ ಕೊಟ್ಟಿದ್ದರು. ಈ ಪ್ರಕರಣದಲ್ಲಿ ಹುರುಳಿಲ್ಲ ಎಂದು ಯಡಿಯೂರಪ್ಪ ಜಾಮೀನು ಪಡೆಯುವ ಗೋಜಿಗೂ ಹೋಗಿಲ್ಲ. ಆದರೆ ಇದ್ದಕ್ಕಿದ್ದಂತೆ ರಾಜ್ಯ ರಾಜಕೀಯದಲ್ಲಿ ಯಡಿಯೂರಪ್ಪ ಕೇಸ್‌ ಮತ್ತೆ ಸಂಚಲನ ಉಂಟು ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

Share This Article
Facebook Twitter Copy Link Print
Previous Article ಇನ್ಮುಂದೆ ತಿರುಮಲ ಬೆಟ್ಟದಲ್ಲಿ ‘ಗೋವಿಂದ..ಗೋವಿಂದ’ ಘೋಷ ಮಾತ್ರ ಮೊಳಗಬೇಕು-ಸಿಎಂ ನಾಯ್ಡು
Next Article ಯುವತಿಯರೇ ಈ ಜ್ಯೂಸ್ ಕುಡಿಯಿರಿ.. ಮೇಕಪ್ ಬೇಡ್ವೇ ಬೇಡ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?