newsics.com
ಬೆಂಗಳೂರು: ‘ಬಿಗ್ ಬಾಸ್’ ಮನೆಯೊಳಗೆ ಸ್ಪರ್ಧಿಯಾಗಿ ಹೋಗಿಬಂದ ಬಳಿಕ ರಕ್ಷಕ್ ಬುಲೆಟ್ ಜನಪ್ರಿಯತೆ ಹೆಚ್ಚಾಗಿದೆ.
ಸದ್ಯ ರಕ್ಷಕ್ ಹಂಚಿಕೊಂಡಿರುವ ಒಂದು ಪೋಸ್ಟ್ ಎಲ್ಲರ ಗಮನಸೆಳೆಯುತ್ತಿದೆ.
ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ರಕ್ಷಕ್ ಬುಲೆಟ್ ನಿರ್ಧರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ಹೀಗಾಗೊ, ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ರಕ್ಷಕ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
https://www.instagram.com/p/C8R0ilePtkC/?utm_source=ig_embed&ig_rid=6d7b2f25-2d7e-49ae-89bd-668f0f669250
ದರ್ಶನ್ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕಳೆದ ಮಂಗಳವಾರದಿಂದ ಅವರು ಪೊಲೀಸರ ಕಸ್ಟಡಿಯಲ್ಲಿದ್ದಾರೆ.
ಬುಲೆಟ್ ಪ್ರಕಾಶ್ ಮತ್ತು ದರ್ಶನ್ ನಡುವೆ ಆತ್ಮೀಯ ಒಡನಾಟ ಇತ್ತು. ರಕ್ಷಕ್ ಕೂಡ ದರ್ಶನ್ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿರುವ ಹಲವು ವಿಡಿಯೋ ಕ್ಲಿಪ್ಗಳು ವೈರಲ್ ಆಗುತ್ತಿರುತ್ತವೆ. ಇದೀಗ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂದು ರಕ್ಷಕ್ ನಿರ್ಧರಿಸಿರುವುದು ದರ್ಶನ್ ಪ್ರಕರಣವೇ ಕಾರಣ ಎಂಬ ಚರ್ಚೆ ಆರಂಭವಾಗಿದೆ.
ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್ಗೂ ಸಂಬಂಧವಿದ್ಯಾ?
ಮಳೆಗಾಲ ಶುರುವಾಗಿದೆ… ಇದು ಶೀತ-ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ