newsics.com
ಬೆಂಗಳೂರು: ದರ್ಶನ್ ವಿರುದ್ಧ ಕೇಳಿಬಂದಿರುವ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ಚಿಕ್ಕಣ್ಣ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅದ್ರಲ್ಲೂ ಕೊಲೆ ನಡೆಯುವ ಕೆಲವೇ ಗಂಟೆಗಳ ಹಿಂದೆ ನಟ ಚಿಕ್ಕಣ್ಣ ಕೂಡ ದರ್ಶನ್ & ಗ್ಯಾಂಗ್ ಜತೆ ಪಾರ್ಟಿ ಮಾಡಿದ್ದರಂತೆ.
ಜೂನ್ 8ರಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ & ಕೊಲೆ ನಡೆಸುವ ಮೊದಲು ದರ್ಶನ್ & ಗ್ಯಾಂಗ್ ಆರೋಪಿ ವಿನಯ್ಗೆ ಸೇರಿದ ಸ್ಟೋನಿ ಬ್ರೂಕ್ ಎಂಬ ಖಾಸಗಿ ಹೋಟೆಲ್ನಲ್ಲಿ ಪಾರ್ಟಿ ಮಾಡಿದ್ದರಂತೆ. ಇದೇ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗವಹಿಸಿದ್ದ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ.
ರೇಣುಕಾಸ್ವಾಮಿ ಕರೆ ತರುವ ವಿಚಾರ ಅಥವಾ ಕೊಲೆ ಮಾಡುವ ವಿಚಾರದ ಬಗ್ಗೆ ಇಲ್ಲಿ ಚರ್ಚೆ ಆಗಿತ್ತಾ ಎಂದು ವಿಚಾರಣೆ ನಡೆಸಿದ್ರು. ಬಂಧಿತ ಆರೋಪಿಗಳ ಜತೆ ನಟ ಚಿಕ್ಕಣ್ಣನ ಬಳಿಯೂ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
ವಿಡಿಯೋ ಚಿತ್ರೀಕರಣ ಮೂಲಕ ಮಹಜರು ಪ್ರಕ್ರಿಯೆ ರೆಕಾರ್ಡ್ ಮಾಡುತ್ತಿರುವ ಪೊಲೀಸರು, ಒಂದು ಗಂಟೆ ಮುಂಚಿತವಾಗಿಯೇ ಚಿಕ್ಕಣ್ಣ ಸ್ಟೋನಿ ಬ್ರೂಕ್ಸ್ ರೆಸ್ಟೋರೆಂಟ್ ಗೆ ಕರೆತಂದಿದ್ರು.
ಆದರೆ ಸದ್ಯಕ್ಕೆ ನಟ ಚಿಕ್ಕಣ್ಣ ಅರೆಸ್ಟ್ ಆಗುವುದಿಲ್ಲ. ಆದರೆ ಪಾರ್ಟಿ ಮಾಡುವ ಸಮಯದಲ್ಲಿ ಈ ಕೊಲೆ ಸಂಬಂಧಿಸಿದ ವಿಚಾರ ಪ್ರಸ್ತಾಪ ಆಗಿತ್ತಾ? ನಟ ದರ್ಶನ್ ರೇಣುಕಾಸ್ವಾಮಿ ಕೊಲೆಯ ಬಗ್ಗೆ ಏನಾದ್ರೂ ಹೇಳಿದ್ದರಾ? ಎಂಬ ಬಗ್ಗೆ ಚಿಕ್ಕಣ್ಣ ಅವರನ್ನು ವಿಚಾರಣೆ ಮಾಡಲಿದ್ದಾರೆ. ಹಾಗೇ ಚಿಕ್ಕಣ್ಣ ಏನಾದ್ರೂ ಈ ವಿಚಾರಗಳನ್ನ ತಿಳಿಸಿದರೆ, ಚಿಕ್ಕಣ್ಣ ಹೇಳಿಕೆಯನ್ನು ಸಾಕ್ಷಿಯಾಗಿ ಪರಿಗಣಿಸುತ್ತೇವೆ ಎನ್ನುತ್ತಿದ್ದಾರೆ ಪೊಲೀಸರು. ಹೀಗಾಗಿ ನಟ ಚಿಕ್ಕಣ್ಣಗೆ ಸದ್ಯಕ್ಕಂತೂ ರಿಲೀಫ್ ಸಿಕ್ಕಿದೆ.