newsics.com
ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.
ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್