newsics.com
ಸಿದ್ದಾಪುರ(ಉತ್ತರ ಕನ್ನಡ): ಬಟ್ಟೆ ಕೊಡಿಸುವುದಾಗಿ ನಂಬಿಸಿ ಪರಿಚಯದ ಯುವತಿಯೊಬ್ಬಳಿಗೆ ಲೈಂಗಿಕ ಕ್ರಿಯೆಗೆ ಯತ್ನಿಸಿ ಒಪ್ಪದ್ದಕ್ಕೆ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಿಆರ್ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿರುವ ಧಾರವಾಡದ ಅಣ್ಣಿಗೇರಿಯ ಕೊಟ್ರೇಶ ಜಗದೇವಪ್ಪ ಅಕ್ಕಿ(46) ಎಂಬುವರ ವಿರುದ್ಧ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಅಂಗಡಿಯಲ್ಲಿ ಬಟ್ಟೆ ಕೊಡಿಸುವುದಾಗಿ ಕೊಟ್ರೇಶ್ ಅದೇ ಪಟ್ಟಣದ ಯುವತಿಗೆ ಆರೋಪಿ ನಂಬಿಸಿದ್ದಾನೆ. ಬಳಿಕ ಹುಬ್ಬಳ್ಳಿಯಿಂದ ಕಾರಿನಲ್ಲಿ ಯುವತಿಯನ್ನು ಕರೆತಂದು ಸಿದ್ದಾಪುರ- ಶಿರಸಿ ರಸ್ತೆಯ ಕೆಸ್ತೂರು ಬಳಿಯ ರಸ್ತೆಯಲ್ಲಿ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ಅದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ಕೊಲೆಗೆ ಪ್ರಯತ್ನಿಸಿದ್ದಾನೆ.
ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.