newsics.com
ಕೋಲಾರ: ವಿದ್ಯುತ್ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಬೆನ್ನಲ್ಲೇ ಕೋಲಾರ ತಾಲೂಕಿನ ಕಾಜಿಕಲ್ಲಹಳ್ಳಿ ಬಳಿ ಇರುವ ಆನೆ ಪುನರ್ವಸತಿ ಕೇಂದ್ರದಲ್ಲಿದ್ದ ಗಂಗಾಶ್ರೀ ಆನೆ ಮೃತಪಟ್ಟಿದೆ.
ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ 75 ವರ್ಷದ ಗಂಗಾಶ್ರೀ ಆನೆ ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದೆ.
ಕಳೆದ ಮೂರು ತಿಂಗಳಿಂದ ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿ ಇರುವ ಆನೆಗಳ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ 75 ವರ್ಷದ ಗಂಗಾಶ್ರೀ ಮೃತಪಟ್ಟಿದೆ. ಸದ್ಯ ಆನೆ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಪುನರ್ವಸತಿ ಕೇಂದ್ರ ಮುಖ್ಯಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
1996ರಲ್ಲಿ ಗದುಗಿನ ಮಠದ ಸ್ವಾಮೀಜಿಯೊಬ್ಬರು ಯಡಿಯೂರು ದೇವಾಲಯಕ್ಕೆ ಗಂಗಾಶ್ರೀ ಆನೆಯನ್ನು ಕೊಡುಗೆಯಾಗಿ ನೀಡಿದ್ದರು. ಅಂದಿನ ಸಿಎಂ ಆಗಿದ್ದ ಜೆ.ಹೆಚ್. ಪಟೇಲ್ ಅವರು ಸರ್ಕಾರದ ವತಿಯಿಂದ ಸ್ವೀಕರಿಸಿ ದೇವಾಲಯಕ್ಕೆ ಹಸ್ತಾಂತರ ಮಾಡಿದ್ದರು. 28 ವರ್ಷಗಳಿಂದ ಯಡಿಯೂರು ಮಠದಲ್ಲಿಯೇ ಈ ಆನೆ ಇತ್ತು.
ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್
ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್ ವಿರುದ್ಧ ಎಫ್ಐಆರ್
ಜೂನ್ 19, ಬುಧವಾರ: ದಿನ ಭವಿಷ್ಯ- ಮೇಷದವರಿಗೆ ಮಾನಸಿಕ ಒತ್ತಡ, ಮೀನ ರಾಶಿಯವರಿಗೆ ಅನಗತ್ಯ ಖರ್ಚು