newsics.com
ನವದೆಹಲಿ: ಅಬಕಾರಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಇಂದು ಜಾಮೀನು ಮಂಜೂರಾಗಿದೆ.
ಮಾರ್ಚ್ ತಿಂಗಳಲ್ಲಿ ಅಬಕಾರಿ ಕಾಯ್ದೆಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆದರೆ ಚುನಾವಣೆಯ ಸಮಯದಲ್ಲಿ ಕೆಲ ದಿನ ಬೇಲ್ ಮೇಲೆ ಹೊರಗಿದ್ದ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ಮತ್ತೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಶರಣಾಗಿದ್ದರು.
ಈಗ ದೆಹಲಿ ನ್ಯಾಯಾಲಯ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಮಧ್ಯಾಹ್ನದ ನಂತರ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.
ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿರುವುದರಿಂದ ಆಮ್ ಆದ್ಮಿ ಪಕ್ಷ ಹಾಗೂ ದೆಹಲಿ ಸಿಎಂಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈಗಾಗಲೇ ಎಎಪಿಯ ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಅವರು ಈಗಾಗಲೇ ಜೈಲಿನಲ್ಲಿರುವುದರಿಂದ ಎಎಪಿ ಕಾರ್ಯಕರ್ತರ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿತ್ತು. ಆದರೆ ಈಗ ಕೇಜ್ರಿವಾಲ್ ಬಿಡುಗಡೆಯಿಂದಾಗಿ ಎಎಪಿಗೆ ದೊಡ್ಡ ಬಲ ಬಂದಂತಾಗಿದೆ.
ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್ಪ್ಲುಯೆನ್ಸರ್ ಸಾವು
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ
ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!