newsics.com
ತಮಿಳುನಾಡು: ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ 25ಕ್ಕೆ ಏರಿಕೆಯಾಗಿದೆ. ಬುಧವಾರ ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ ಆರಂಭದಲ್ಲಿ ನಾಲ್ವರು ಮೃತಪಟ್ಟಿದ್ದರು.
ಈ ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇತ್ತ ಪೊಲೀಸ್ ಎಸ್ಪಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
ಬುಧವಾರ ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ ಆರಂಭದಲ್ಲಿ ನಾಲ್ವರು ಮೃತಪಟ್ಟಿದ್ದರು.
ಈ ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಯಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇತ್ತ ಪೊಲೀಸ್ ಎಸ್ಪಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
ಕರುಣಾಪುರಂ ಪಟ್ಟಣ ವ್ಯಾಪ್ತಿಯಲ್ಲಿ ಈ ನಕಲಿ ಮದ್ಯ ಮಾರಾಟ ಮಾಡಲಾಗಿದೆ. ದಿನಗೂಲಿ ನೌಕರರು ಬುಧವಾರ ಸಂಜೆ ಕಡಿಮೆ ಬೆಲೆಗೆ ಲಭ್ಯವಿದ್ದ ನಕಲಿ ಮದ್ಯವನ್ನು ಸೇವಿಸಿದ್ದಾರೆ. ಮದ್ಯ ಸೇವಿಸಿದ ಕೆಲ ಹೊತ್ತಲ್ಲೇ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಹಲವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕೆಲವರು ಮನೆ ಸೇರಿಕೊಳ್ಳುವ ಹೊತ್ತಿಗೆ ಮೃತಪಟ್ಟಿದ್ದಾರೆ.
ಜಿಲ್ಲಾಧಿಕಾರಿ ಶ್ರವಣ್ಕುಮಾರ್ ಜಟಾವತ್ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ ಮರಕಳಿಸಿದ ಕಾರಣ ಇದೀಗ ಶ್ರವಣ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಕೂಲಿ ಕಾರ್ಮಿಕರು ಕೆಲಸ ಮುಗಿಸಿ ಮನೆಗೆ ಮರಳುವಾಗ ನಕಲಿ ಮದ್ಯ ಕುಡಿದಿದ್ದಾರೆ. ಅಗ್ಗದ ಬೆಲೆಯಲ್ಲಿ ಲಭ್ಯವಾದ ಕಾರಣ ಬಹುತೇಕ ಕೂಲಿ ಕಾರ್ಮಿಕರು ಈ ನಕಲಿ ಮದ್ಯ ಸೇವಿಸಿದ್ದಾರೆ. ಮದ್ಯ ಸೇವಿಸಿ ಮನೆಗೆ ಮರಳಿದ ಹಲವರಿಗೆ ವಾಂತಿ ಭೇದಿ, ಹೊಟ್ಟೆ ನೋವು, ಅಸ್ವಸ್ಥತೆ ಕಾಣಿಸಿಕೊಂಡಿದೆ. ಆತಂಕಗೊಂಡ ಕುಟಂಬಸ್ಥರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಗಂಭೀರವಾಗಿ ಅಸ್ವಸ್ಥಗೊಂಡ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಇದೀಗ ಹಲವು ಕಾರ್ಮಿಕರ ಪರಿಸ್ಥಿತಿ ಗಂಭೀರವಾಗಿದೆ. ನಕಲಿ ಮದ್ಯ ಮಾರಾಟಗಾರರು ನಾಪತ್ತೆಯಾಗಿದ್ದಾರೆ.
ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಬಸ್ ಪ್ರಯಾಣ ದರವೂ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ
ವೃಷಭ- ಅಮೂಲ್ಯವಾದದ್ದು ಸಿಗಬಹುದು, ಕುಂಭ- ಸಂಗಾತಿಯೊಂದಿಗೆ ಅಸಮಾಧಾನ, ನಿಮ್ಮದ್ಯಾವ ರಾಶಿ?
ಶುಭೋದಯ… ಜ್ಯೇಷ್ಠ ಮಾಸ ಶುಕ್ಲಪಕ್ಷ ತ್ರಯೋದಶಿ ಗುರುವಾರ, 20 ಜೂನ್ 2024
UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ