newsics.com
ವಾರಾಣಸಿ(ಉತ್ತರ ಪ್ರದೇಶ): ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ದ ಮುಖ್ಯ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್(86) ಅವರು ಶನಿವಾರ ನಿಧನರಾದರು.
ಅರ್ಚಕರ ಆರೋಗ್ಯವು ಕಳೆದ ಕೆಲವು ದಿನಗಳಿಂದ ಹದಗೆಟ್ಟಿತ್ತು. ಅವರ ಅಂತ್ಯಕ್ರಿಯೆಯನ್ನು ಮಣಿಕರ್ಣಿಕ ಘಾಟ್ನಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತ್ತು. ಈ ಆಧ್ಯಾತ್ಮಿಕ ಸಮಾರಂಭದಲ್ಲಿ ವಾರಾಣಸಿಯ ಹಿರಿಯ ಆರ್ಚಕರಾಗಿದ್ದ ದೀಕ್ಷಿತ್ ಭಾಗಿಯಾಗಿದ್ದರು.
ದೀಕ್ಷಿತ್ ಅವರು ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯ ಮೂಲದವರಾಗಿದ್ದು, ಅನೇಕ ಪೀಳಿಗೆಯಿಂದ ವಾರಾಣಸಿಯಲ್ಲಿ ನೆಲೆಸಿದ್ದರು.