newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಜುಲೈ 4ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ರನ್ನು ಶನಿವಾರ ಹಾಜರುಪಡಿಸಿದ್ದು, ಕೋರ್ಟ್ ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಜುಲೈ 4ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕಳೆದ 12 ದಿನಗಳಿಂದ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿತ್ತು. ಮುಂದಿನ ವಿಚಾರಣೆಗೆವರೆಗೆ ಇವರೆಲ್ಲ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾಗಿದೆ.
ರೇಣುಕಾಸ್ವಾಮಿ ಭೀಕರ ಹತ್ಯೆ ಹಿನ್ನೆಲೆ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಸೇರಿ ಉಳಿದ 13 ಆರೋಪಿಗಳು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈಗ ದರ್ಶನ್ ಸೇರಿ ನಾಲ್ವರು ಪರಪ್ಪನ ಅಗ್ರಹಾರ ಸೇರಿದ್ದು, ಈ ಮೂಲಕ ಕೊಲೆ ಕೇಸ್ನಲ್ಲಿ ಭಾಗಿಯಾದ ಎಲ್ಲ 17 ಆರೋಪಿಗಳು ಜೈಲು ಸೇರಿದಂತಾಗಿದೆ.
ನ್ಯಾಯಾಲಯದ ಮುಂದೆ ಗುರುವಾರ ದರ್ಶನ್ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಮತ್ತೆರಡು ದಿನ ಕಸ್ಟಡಿಗೆ ಪೊಲೀಸರು ಪಡೆದಿದ್ದರು. ಈ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗಿತ್ತು.
ಆರೋಪಿಗಳ ಪಟ್ಟಿ ಇಂತಿದೆ:
A1 ಪವಿತ್ರಾಗೌಡ, A2 ದರ್ಶನ್, A3 ಪವನ್ ಅಲಿಯಾಸ್ ಪುಟ್ಟಸ್ವಾಮಿ, A4 ರಾಘವೇಂದ್ರ, A5 ನಂದೀಶ್, A6 ಜಗದೀಶ್ ಅಲಿಯಾಸ್ ಜಗ್ಗ , A7.ಅನುಕುಮಾರ್, A8.ರವಿ , A9.ರಾಜು (ಧನರಾಜ್) , A10.ವಿನಯ್, A11.ನಾಗರಾಜು, A12.ಲಕ್ಷ್ಮಣ್, A13.ದೀಪಕ್, A14.ಪ್ರದೋಶ್, A15.ಕಾರ್ತಿಕ್, A16.ಕೇಶವ ಮೂರ್ತಿ, A17.ನಿಖಿಲ್ ನಾಯಕ್.