ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಜುಲೈ 4ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಆಪ್ತರಾದ ವಿನಯ್‌, ಪ್ರದೂಷ್‌ ಹಾಗೂ ಧನರಾಜ್‌ರನ್ನು ಶನಿವಾರ ಹಾಜರುಪಡಿಸಿದ್ದು, ಕೋರ್ಟ್ ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜುಲೈ 4ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕಳೆದ 12 ದಿನಗಳಿಂದ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್‌ ಕಸ್ಟಡಿಯಲ್ಲಿತ್ತು. … Continue reading ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು