newsics.com
ಬೆಂಗಳೂರು: ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ಭೂಕಬಳಿಕೆ ದೂರು ದಾಖಲಾಗಿದೆ.
ಬಾಲಿವುಡ್ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮೂಲಗಳ ಪ್ರಕಾರ, ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದು, ಜತೆಗೆ ಈ ಸಂಬಂಧ ತಮ್ಮ ಟ್ವೀಟರ್ ಖಾತೆಯಲ್ಲಿ ದೂರಿನ ಪ್ರತಿ ಶೇರ್ ಮಾಡಿದ್ದಾರೆ.
2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್ ಮಾಡಿದ್ದ ಅವರು, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದು, ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದಾರೆ. ಈ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಈಗ ಮತ್ತೊಮ್ಮೆ ಆರೋಪಿಸಿದ್ದಾರೆ.
ಸ್ಥಳೀಯ ಕೋರ್ಟ್ನಲ್ಲಿ ಜಾಮೀನು, ಹೈಕೋರ್ಟ್ನಿಂದ ರದ್ದು, ಕೇಜ್ರಿವಾಲ್ಗೆ ಜೈಲೇ ಗತಿ
ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ FIR