newsics.com
ಮೈಸೂರು: ಮಂಗಳಮುಖಿಯರು ಗುಂಪಾಗಿ ಬಂದು ಕಿರುಕುಳ ನೀಡಿದ್ದರಿಂದ ನೊಂದ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಉಶು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದ ರಾಹುಲ್ ಮೌರ್ಯ(17) ನೇಣಿಗೆ ಶರಣಾಗಿದ್ದಾನೆ.
ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೃತ ರಾಹುಲ್ ಮೌರ್ಯ ಎಳನೀರು ಮಾರಾಟ ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದ. ಆದರೆ, ಎಳನೀರು ಮಾರಾಟ ಸ್ಥಳಕ್ಕೆ ಬಂದು ಸ್ನೇಹ ಬೆಳೆಸಿಕೊಂಡಿದ್ದ ಮಂಗಳಮುಖಿ ತನ್ನ ಮಗನನ್ನು ಆಗಾಗ ಜತೆಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆಂದು ರಾಹುಲ್ ಮೌರ್ಯನ ತಂದೆ ಆರೋಪಿಸಿದ್ದಾರೆ.
ರಾಹುಲ್ ಮೌರ್ಯ ನಾಲ್ಕು ತಿಂಗಳ ಹಿಂದೆ ರಾಹುಲ್ ಮೌರ್ಯ ನಾಪತ್ತೆಯಾಗಿದ್ದ. ಇದಾದ ನಂತರ ಕಳೆದ ಮೂರು ದಿನಗಳ ಹಿಂದೆ ಅಂದರೆ ಜೂ.21ರಂದು ದೊಡ್ಡಮ್ಮನ ಮನೆಗೆ ವಾಪಸ್ ಆಗಿದ್ದ. ಆದರೆ, ಜೂನ್ 23ರಂದು ಕೆಲವು ಮಂಗಳಮುಖಿಯರಿಂದ ರಾಹುಲ್ ಮೌರ್ಯ ಕುಟುಂಬಸ್ಥರ ಜತೆ ಜಗಳವೂ ಉಂಟಾಗಿತ್ತು. ನೀವು ನಿಮ್ಮ ಹುಡುಗನನ್ನು ನಮ್ಮೊಂದಿಗೆ ಕಳಿಸಿಕೊಡಿ ಎಂದು ಗಲಾಟೆ ಮಾಡಿದ್ದರು. ನಿಮ್ಮ ಮಗನೇ ನಮ್ಮ ಹುಡುಗಿಯನ್ನು ಕರೆದೊಯ್ದಿದ್ದಾನೆಂದು ಆರೋಪಿಸಿ ಮಂಗಳಮುಖಿಯರು ಊರಿನಲ್ಲಿ ಬಂದು ಜೋರಾಗಿ ಗಲಾಟೆಯನ್ನೂ ಮಾಡಿದ್ದರು.
ಗಲಾಟೆಯಿಂದ ಗ್ರಾಮದಲ್ಲಿ ಮನೆಯವರ ಮರ್ಯಾದೆ ಹಾಳಾಯಿತು ಎಂದು ರಾಹುಲ್ ಮೌರ್ಯ ಮನನೊಂದಿದ್ದ. ಜೂ.23ರಂದು ಮಂಗಳಮುಖಿಯರು ಮನೆಯ ಬಳಿ ಗಲಾಟೆ ಮಾಡಿದ್ದು, ಅದೇ ದಿನ ಸಂಜೆ 5 ಗಂಟೆಗೆ ಹೆಜ್ಜೂರು ಗ್ರಾಮದ ಜಮೀನಿನಲ್ಲಿರುವ ಶೆಡ್ನಲ್ಲಿ ರಾಹುಲ್ ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಹುಣಸೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
1300 ಜನರಿಗೆ 600 ಕೋಟಿ ವಂಚನೆ: ಇಸಿಯಿಂದ ಅಂಬರ್ ದಲಾಲ್ ಕಂಪನಿಯ 37 ಕೋಟಿ ನಗದು ವಶ