newsics.com
ಉಜ್ಜೈನಿ(ಮಧ್ಯಪ್ರದೇಶ): ಪತಿಯೊಂದಿಗೆ ಜಗಳ ಮಾಡಿ ಹೊರಬಂದ ಮಹಿಳೆಯನ್ನು ಎಳೆದೊಯ್ದ 60 ವರ್ಷದ ಕಾಮುಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಭೀಕರ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಪ್ರತಿಭಟಿಸಿದ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಪ್ರತಿಭಟಿಸಿದ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಜೂನ್ 6ರಂದು ಪತಿಯೊಂದಿಗೆ ಜಗಳ ಮಾಡಿದ 36 ವರ್ಷದ ಮಹಿಳೆ ಉಜ್ಜೈನಿ ರೈಲು ನಿಲ್ದಾಣದಲ್ಲಿ ಕುಳಿತಿದ್ದಳು. ಮಥುರಾಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದ ಮಹಿಳೆಗೆ ಆಶ್ರಯ ನೀಡುವ ನೆಪದಲ್ಲಿ 60 ವರ್ಷ ಕಾಮುಕ ಆರೋಪಿ ಕಮಲೇಶ್ ಪಟೇಲ್ ಆಕೆಯನ್ನು ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿದ್ದಾನೆ.
ಮನೆಯಲ್ಲಿ ಆಕೆಗೆ ಆಹಾರದಲ್ಲಿ ನಿದ್ದೆ ಮಾತ್ರೆ ನೀಡಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ನಿದ್ದೆಯ ಮಂಪರಿನಲ್ಲೇ ಪ್ರತಿಭಟಿಸಿದ್ದಾಳೆ. ಆದರೆ ಕಾಮುಕ ಕಮಲೇಶ್ ಪಟೇಲ್ ಮಹಿಳೆಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಆಕೆಯ ದೇಹವನ್ನು ಕತ್ತರಿಸಿದ್ದಾನೆ. ಸರಿಸುಮಾರು 4 ಗಂಟೆಗೂ ಹೆಚ್ಚು ಕಾಲ ಮಹಿಳೆಯ ದೇಹ ಕತ್ತರಿಸಿದ ಕಮಲೇಶ್ ಪಟೆಲ್, ಗೋಣಿ ಚೀಲದಲ್ಲಿ ಪ್ಯಾಕ್ ಮಾಡಿದ್ದಾನೆ. ಬಳಿಕ ರೈಲು ನಿಲ್ದಾಣಕ್ಕೆ ತೆರಳಿ ಎರಡು ರೈಲುಗಳಲ್ಲಿ ಆಕೆಯ ಮೃತದೇಹದ ತುಂಡುಗಳನ್ನು ಇಟ್ಟು ಪರಾರಿಯಾಗಿದ್ದಾನೆ.
ಜೂನ್ 10 ರಂದು ಉತ್ತರಖಂಡ ರಿಷಿಕೇಶಿ ರೈಲು ನಿಲ್ದಾಣದಲ್ಲಿ ರೈಲಿನಲ್ಲಿ ಮಹಿಳೆಯ ಕೈ ಕಾಲುಗಳು ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಮಹಿಳೆಯ ದೇಹದ ಇತರ ಭಾಗಗಳು ಸಿಕ್ಕಿವೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ರೈಲು ಹಾದು ಬಂದ ಎಲ್ಲಾ ನಿಲ್ದಾಣಗಳಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆರೋಪಿ ಪತ್ತೆ ಹಚ್ಚಿದ ಪೊಲೀಸರು ಕಮಲೇಶ್ ಪಟೇಲ್ ಬಂಧಿಸಿದ್ದಾರೆ. ಈತ ಇದೇ ರೀತ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಆರೋಪಿ ಪತ್ತೆ ಹಚ್ಚಿದ ಪೊಲೀಸರು ಕಮಲೇಶ್ ಪಟೇಲ್ ಬಂಧಿಸಿದ್ದಾರೆ. ಈತ ಇದೇ ರೀತ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಧೂಳ್ ಎಬ್ಬಿಸಾವ ಹಾಡಿನಲ್ಲಿ ‘ಗೌರಿ’ಹಾಟ್ ಜೋಡಿ:ಸಾಂಗ್ ಸಖತ್ ಟ್ರೆಂಡಿಂಗ್
1300 ಜನರಿಂದ 600 ಕೋಟಿ ವಂಚನೆ: ಇಸಿಯಿಂದ ಅಂಬರ್ ದಲಾಲ್ ಕಂಪನಿಯ 37 ಕೋಟಿ ನಗದು ವಶ