newsics.com
ಬೆಂಗಳೂರು : ರೇಣುಕಾ ಸ್ವಾಮಿ ಹತ್ಯೆ ಕೇಸಲ್ಲಿ ಪವಿತಾ ಗೌಡ ಆರೋಪಿ ಆಗಿದ್ದು, ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ.
ಹೆಚ್ಚು ಉಪ್ಪು, ಖಾರ ಇಲ್ಲದ ಜೈಲಿನ ಆಹಾರ ಸೇವಿಸುವುದು ಪವಿತ್ರಾ ಗೌಡಗೆ ಕಷ್ಟ ಆಗಿದೆ. ಚಾಪೆಯಲ್ಲಿ ಮಲಗುವುದು ಅವರಿಗೆ ಸಾಧ್ಯವಾಗುತ್ತಿಲ್ಲ. ಸೊಳ್ಳೆ ಕಾಟ ಸಹ ಇರುವುದರಿಂದ ಪವಿತ್ರಾ ಗೌಡ ಮತ್ತಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಅವರು ಮತ್ತೆ ಮತ್ತೆ ಎಚ್ಚರಕೊಳ್ಳುತ್ತಿದ್ದರು.
ಸರಿಯಾಗಿ ಊಟ ಸೇರದೇ, ನಿದ್ರೆ ಬಾರದೇ ಅವರು ಒದ್ದಾಡುತ್ತಿದ್ದಾರೆ. ಮಂಕಾಗಿ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆಗಿರುವ ದರ್ಶನ್ (Darshan) ಕೂಡ ಈಗ ಜೈಲಿನಲ್ಲಿದ್ದಾರೆ.