newsics.com
ಅಯೋಧ್ಯೆ: ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತ್ತಿದೆ ಎಂದು ವರದಿಯಾಗಿದೆ.
ಆರು ತಿಂಗಳ ಹಿಂದೆ ಅಂದರೆ, 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ. ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ವರದಿ ಹೇಳಿದೆ.
ಈ ಕುರಿತು ಮಾತನಾಡಿರುವ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಹೇಳಿದ್ದಾರೆ.
ಜುಲೈ 2025ರೊಳಗೆ ರಾಮಮಂದಿರದ ಸಂಪೂರ್ಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆದರೆ ಅದು ಅಸಾಧ್ಯ ಎಂಬುವುದು ನನ್ನ ಅನಿಸಿಕೆಯಾಗಿದೆ. ಈಗಾಗಲೇ ಬಂದ ಮೊದಲ ಮಳೆಗೆ ಬಾಲರಾಮನ ಜಾಗಕ್ಕೆ ನೀರು ಬಂದಿದೆ. ಹೇಗೆ ಸೋರಿಕೆ ಆಯ್ತು? ಮಳೆನೀರು ಒಳಗೆ ಬರಲು ಕಾರಣ ಏನು ಎಂಬ ಪ್ರಶ್ನೆಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಹಾಗೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.
ಮಂದಿರ ನಿರ್ಮಾಣದಲ್ಲಿ ಎಲ್ಲಿ ತಪ್ಪಾಗಿದೆ ಎಂಬುದನ್ನು ಎರಡ್ಮೂರು ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಪರಿಹಾರ ರೂಪಿಸಬೇಕು. ಒಂದು ವೇಳೆ ಮಳೆ ಹೆಚ್ಚಾದ್ರೆ ಸೋರಿಕೆ ಹೆಚ್ಚಾಗಬಹುದು ಎಂದು ಸತ್ಯೇಂದ್ರ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.
ಮದುವೆಗೆ ಸಿದ್ದಗೊಳ್ಳುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರೇಮಿ
ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ