Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಮಾಣವಚನ ಸ್ವೀಕಾರ ವೇಳೆ ಸಂಸತ್ತಲ್ಲೇ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಓವೈಸಿ! ವಿಡಿಯೋ ನೋಡಿ
ದೇಶ

ಪ್ರಮಾಣವಚನ ಸ್ವೀಕಾರ ವೇಳೆ ಸಂಸತ್ತಲ್ಲೇ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಓವೈಸಿ! ವಿಡಿಯೋ ನೋಡಿ

Share
2 Min Read
SHARE

newsics.com

ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ವೇಳೆ “ಜೈ ಪ್ಯಾಲೆಸ್ತೀನ್” ಎಂದು ಘೋಷಣೆ ಕೂಗಿದ್ದಾರೆ.

ಈ ಘೋಷಣೆ ವಿವಾದಕ್ಕೆ ಕಾರಣವಾಗಿದೆ. ಐದನೇ ಬಾರಿಗೆ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಒವೈಸಿ, ನಂತರ ಎಕ್ಸ್‌ನಲ್ಲಿ ಈ ಕುರಿತಾಗಿ ಪೋಸ್ಟ್‌ ಮಾಡಿದ್ದರು,

ಭಾರತದಲ್ಲಿ ಸಾಮಾಜಿಕವಾಗಿ ಕೆಳಸ್ತರದಲ್ಲಿರುವವರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಹೇಳಿದರು.

ಅಸಾದುದ್ದೀನ್ ಓವೈಸಿ ಪ್ರಮಾಣವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ‘ಜೈ ಶ್ರೀರಾಮ್’ ಘೋಷಣೆ ಕೂಗಲು ಆರಂಭಿಸಿದರು. ಘೋಷಣೆಗಳಿಂದ ವಿಚಲಿತರಾಗದ ಓವೈಸಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್” ಎಂದು ಹೇಳುವ ಮೂಲಕ ತಮ್ಮ ಪ್ರಮಾಣವಚನ ಮುಕ್ತಾಯ ಮಾಡಿದರು.

2019 ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು “ಜೈ ಭೀಮ್, ಅಲ್ಲಾ-ಓ-ಅಕ್ಬರ್ ಮತ್ತು ಜೈ ಹಿಂದ್” ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದ್ದರು. 2024 ರ ಲೋಕಸಭೆ ಚುನಾವಣೆಯಲ್ಲಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರನ್ನು 3.3 ಲಕ್ಷ ಮತಗಳಿಂದ ಓವೈಸಿ ಸೋಲಿಸಿ ಸಂಸತ್‌ಗೆ ಪ್ರವೇಶ ಪಡೆದಿದ್ದಾರೆ.

ಅವರ ಘೋಷಣೆಯ ಬಗ್ಗೆ ವಿವಾದ ಭುಗಿಲೆದ್ದಂತೆ, ಓವೈಸಿ ಅವರು ‘ಜೈ ಪ್ಯಾಲೆಸ್ತೀನ್’ ಎಂದು ಹೇಳಬಾರದು ಎಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ ಎಂದು ವಾದ ಮಾಡಿದ್ದಾರೆ.

ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರು ಓವೈಸಿ ನೀಡಿದ ‘ಜೈ ಪ್ಯಾಲೆಸ್ತೀನ್’ ಘೋಷಣೆ “ಸಂಪೂರ್ಣವಾಗಿ ತಪ್ಪು” ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಓವೈಸಿ ಅವರ ಘೋಷಣೆಗೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ನಾವು ಯಾವುದೇ ದೇಶವನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ, ಆದರೆ ಯಾವುದೇ ದೇಶದ ಹೆಸರನ್ನು ಸದನದಲ್ಲಿ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ಹೇಳಿದರು.
ಪ್ಯಾಲೆಸ್ತೇನ್‌ ಪರ ಹೋರಾಟ ಮಾಡುವ ಭಯೋತ್ಪಾದಕ ಸಂಘಟನೆಯಾದ ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧವು ಜೂನ್‌ನಲ್ಲಿ ಎಂಟನೇ ತಿಂಗಳಿಗೆ ಪ್ರವೇಶಿಸಿತು, ಸುಮಾರು 40,000 ಜನರು ಇಲ್ಲಿಯವರೆಗೂ ಸಾವು ಕಂಡಿದ್ದು, ಲಕ್ಷಕ್ಕೂ ಅಧಿಕ ಜನ ಸ್ಥಳಾಂತರಗೊಂಡಿದ್ದಾರೆ.

Asaduddin Owaisi chants 'Jai Palestine' after taking oath as MP.

This is the same Owaisi who refuses to say 'Vande Mataram' and keeps opposing it. pic.twitter.com/cGwIUeOj7P

— Varun Kumar Rana (@VarunKrRana) June 25, 2024

ಹಾಲಿನ ದರ‌ ಪ್ರತಿ‌ ಲೀಟರ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ

ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಯುವತಿ ಎದುರು ಅಸಹ್ಯ ವರ್ತನೆ ತೋರಿದ ಕಾಮುಕ,ವೈರಲ್ ವಿಡಿಯೋ ನೋಡಿ

ರಸ್ತೆಯಲ್ಲಿ ನಡೆದು ಸಾಗುತ್ತಿದ್ದ ಯುವತಿ ಎದುರು ಅಸಹ್ಯ ವರ್ತನೆ ತೋರಿದ ಕಾಮುಕ,ವೈರಲ್ ವಿಡಿಯೋ ನೋಡಿ

ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!

TAGGED:Owaisi Jai Palestine slogan Parliament during the oath taking newsics
Share This Article
Facebook Twitter Copy Link Print
Previous Article ಹಾಲಿನ ದರ‌ ಪ್ರತಿ‌ 50 ಎಂಎಲ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ
Next Article ಸಂಸತ್‌ನಲ್ಲಿ ಇದೇ ಮೊದಲ ಬಾರಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ: ‌ನಾಳೆ ಓಂ ಬಿರ್ಲಾ, ಸುರೇಶ್ ನಡುವೆ ಸ್ಪರ್ಧೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?