newsics.com
ಬಾರ್ಬಡೋಸ್: ರೋಹಿತ್ ಶರ್ಮಾ ಅವರ ಟೀಮ್ ಇಂಡಿಯಾ 13 ವರ್ಷಗಳ ನಂತರ T20 ವಿಶ್ವಕಪ್ ಗೆದ್ದು ಬೀಗಿತು.
ರಣರೋಚಕ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದು ಸಂಭ್ರಮಿಸಿತು.
ಕೊನೆವರೆಗೂ ತುದಿಗಾಲಲ್ಲಿ ನಿಲ್ಲಿಸಿದ್ದ ಪಂದ್ಯದಲ್ಲಿ ಎಂಟು ವಿಕೆಟ್ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕಾ ಒಂದು ಬಾಲ್ಗೆ 9 ರನ್ ಪಡೆಯಲೇಬೇಕಾದ ಅನಿವಾರ್ಯತೆಗೆ ಸಿಲುಕಿತು. ಆದರೆ ದಕ್ಷಿಣ ಆಫ್ರಿಕಾ ತಂಡದ ಈ ಯತ್ನ ಫಲಿಸಲಿಲ್ಲ.
ಭಾರತ ನೀಡಿದ 177 ರನ್ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಆರಂಭದಲ್ಲಿ ಕೊಂಚ ಮುಗ್ಗರಿಸಿದರೂ ಕ್ವಿಂಟನ್ ಡಿ ಕಾಕ್ (39 ರನ್, 31 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಟ್ರಿಸ್ಟಾನ್ ಸ್ಟಬ್ಸ್ (31 ರನ್, 21 ಎಸೆತ, 3 ಬೌಂಡರಿ, 1 ಸಿಕ್ಸರ್)ರ ಚೇತರಿಕೆಯ ಜೊತೆಯಾಟದಿಂದ ಸುಧಾರಿಸಿಕೊಂಡಿತು.
ಹೆನ್ರಿಕ್ ಕ್ಲಾಸೆನ್ರ (52 ರನ್, 27 ಎಸೆತ, 2 ಬೌಂಡರಿ, 5 ಸಿಕ್ಸರ್) ಸ್ಫೋಟಕ ಆಟ ಭಾರತೀಯ ಬೌಲರ್ಗಳಿಗೆ ತಲೆನೋವಾಗಿ ಪರಿಣಮಿಸಿತು. ಕುಲದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ರ ಅಂತಿಮ ಓವರ್ಗಳಲ್ಲಿ ತಲಾ 14 ಹಾಗೂ 28 ರನ್ ಸಿಡಿಸುವ ಮೂಲಕ ಸೌತ್ ಆಫ್ರಿಕಾ ತಂಡದ ಗೆಲುವನ್ನು ಖಾತ್ರಿ ಪಡಿಸಿದ್ದರು. ಆದರೆ 17ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯ, ಕ್ಲಾಸಿನ್ರ ವಿಕೆಟ್ ಪಡೆಯುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. 18ನೇ ಓವರ್ನಲ್ಲಿ ಬೂಮ್ರಾ 2 ರನ್ ನೀಡಿ ಮಾರ್ಕೊ ಜಾನ್ಸೆನ್ರ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮತ್ತೇ ಗೆಲುವಿನ ಆಸೆ ಚಿಗುರಿಸಿದರು. ಅಂತಿಮವಾಗಿ ಭಾರತ 7 ರನ್ಗಳ ಗೆಲುವು ಸಾಧಿಸಿದೆ.
ಭಾರತದ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್, ಅರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
T20 World cup 2024 ದೆಹಲಿ ಏರ್ಪೋರ್ಟ್ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್