newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಪುತ್ರಿ ಹಂಸ ಮೊಯ್ಲಿ (46) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪುತ್ರಿಯ ಸಾವಿನ ಸುದ್ದಿ ತಿಳಿದು ಛತ್ತೀಸ್ಘಡದಲ್ಲಿದ್ದ ವೀರಪ್ಪ ಮೊಯ್ಲಿಯವರು ರಾತ್ರಿಯೇ ವಾಪಾಸ್ ಆಗಿದ್ದಾರೆ.
ಹಂಸ ಮೊಯ್ಲಿಯವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿ ಪಡೆದಿದ್ದರು. ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ʼಶೃಂಗಾರಂʼನಲ್ಲಿ ಸಹ ಅಭಿನಯಿಸಿ ಅವರು ಗಮನ ಸೆಳೆದಿದ್ದರು.