ಬೀದರ್: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷವಾದ ಆಶ್ಚರ್ಯಕರ ಘಟನೆ ಬೀದರ್ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬವರ ಒಂದೂವರೆ ವರ್ಷದ ಮಗು ಅನಾರೋಗ್ಯದಿಂದ ಮೃತಪಟ್ಟಿತ್ತು. ಮೃತಪಟ್ಟಿದ್ದ ಮಗುವನ್ನ ಅಂತ್ಯಸಂಸ್ಕಾರ ಮಾಡಲಾಗಿತ್ತು. ಆದರೆ ಮರುದಿನ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಮರದ ಮೇಲೆ ಪತ್ತೆಯಾಗಿತ್ತು.
ಮಗುವನ್ನು ಹೊರ ತೆಗೆದು ಕಪ್ಪು ಬಟ್ಟೆಯಲ್ಲಿ ಮರಕ್ಕೆ ಕಟ್ಟಿ ಜೋಳಿಗೆಯಲ್ಲಿ ನೇತು ಹಾಕಲಾಗಿತ್ತು. ಮರಕ್ಕೆ ಕಟ್ಟಿದ್ದ ಮಗುವಿನ ಮೃತದೇಹವನ್ನು ಮತ್ತೆ ಅದೇ ಸ್ಥಳದಲ್ಲಿ ಗ್ರಾಮಸ್ಥರು ಅಂತ್ಯಸಂಸ್ಕಾರ ಮಾಡಿದ್ದಾರೆ. ವಾಮಾಚಾರ ಮಾಡುವವರು ಹೀಗೆ ಮಾಡಿರಬಹುದೆಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!