newsics.com
ಮಹಾರಾಷ್ಟ್ರ: ಗೆಳೆಯರೊಂದಿಗೆ ಆಟವಾಡುತ್ತಿದ್ದ ವೇಳೆ ಬಾಲಕನ ಕಾಲಿಗೆ ಗಾಯವಾಗಿದ್ದು, ಜೂ.15ರಂದು ಶಹಾಪುರದ ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಗಾಯಗೊಂಡ ಕಾಲಿನ ಬದಲಿಗೆ ವೈದ್ಯರು ಖಾಸಗಿ ಅಂಗಕ್ಕೆ ಸುನ್ನತಿ ಶಸ್ತ್ರ ಚಿಕಿತ್ಸೆ ಮಾಡಿ ಯಡವಟ್ಟು ಮಾಡಿದ್ದಾರೆ.
ಒಂಬತ್ತು ವರ್ಷದ ಬಾಲಕನ ಕಾಲಿನ ಗಾಯಕ್ಕೆ ಚಿಕಿತ್ಸೆ ನೀಡಲು ಆಸ್ಪತ್ರೆಗೆ ದಾಖಲಾದ ವೇಳೆ ವೈದ್ಯರು ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ಎಡವಟ್ಟು ಮಾಡಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಬಾಲಕನ ಪೋಷಕರ ಹೇಳಿಕೆಯ ಪ್ರಕಾರ, ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಾಲಿಗೆ ಗಾಯವಾಗಿತ್ತು, ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಅದರಂತೆ ಶಸ್ತ್ರಚಿಕಿತ್ಸೆ ನಡೆದಿದೆ. ಚಿಕಿತ್ಸೆಯ ಬಳಿಕ ಬಾಲಕನ ಖಾಸಗಿ ಅಂಗಕ್ಕೆ ಹಾಕಿರುವ ಬ್ಯಾಂಡೇಜ್ ಕಂಡು ಪೋಷಕರು ಶಾಕ್ ಗೆ ಒಳಗಾಗಿದ್ದಾರೆ. ಅವರ ಮೂರ್ಖತನವನ್ನು ಅರಿತುಕೊಂಡ ಬಳಿಕ ವೈದ್ಯರು ಶೀಘ್ರದಲ್ಲೇ ಅವರ ಗಾಯಗೊಂಡ ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.