Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
Uncategorizedಕರ್ನಾಟಕ

ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Share
1 Min Read
SHARE

ಒಂದು ಕಾಲದಲ್ಲಿ ಸ್ಮಶಾನದಲ್ಲಿ ಮಲಗುತ್ತಿದ್ದ ರಘು ಇಂದು ಟೀಂ ಇಂಡಿಯಾ ಆಟಗಾರರ ಜೊತೆ ವಿಶ್ವ ಸುತ್ತಾಡುತ್ತಾರೆ. ಐಸಿಸಿ ಟಿ20 ವಿಶ್ವಕಪ್ ಗೆಲುವಿನ ಬಳಿಕ ಇಡೀಯ ಭಾರತವೇ ಸಂತಸದಲ್ಲಿ ಕುಣಿಯುತ್ತಿದೆ. ವಿಶ್ವವೇ ಮೆಚ್ಚಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಅವರ ನಡುವೆ ಡ್ರೆಸ್ಸಿಂಗ್ ರೂಮ್ ನಲ್ಲಿ ಹಣೆಗೊಂದು ತಿಲಕವಿಟ್ಟು ಕನ್ನಡಿಗನೊಬ್ಬ ಸಾರ್ಥಕ ನಗೆ ಬೀರುತ್ತಿದ್ದಾನೆ. ಆತನೇ ಭಾರತದ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಯಾನೆ ರಾಘವೇಂದ್ರ.

ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಧ್ಯಮ ವರ್ಗದ ಹುಡುಗ ಈ ರಾಘವೇಂದ್ರ. ಕ್ರಿಕೆಟ್ ಎಂದರೆ ಎಲ್ಲಿಲ್ಲದ ಹುಚ್ಚು. ಒಮ್ಮೆ ಸಂಬಂಧಿಕರ ಮನೆಗೆಂದು ಮುಂಬೈಗೆ ಹೋಗಿದ್ದ ರಘು ಅಲ್ಲಿ ಕ್ರಿಕೆಟ್ ಗುರು ರಮಾಕಾಂತ್ ಆಚ್ರೇಕರ್ ಅವರ ಬಳಿ ಕೆಲ ದಿನಗಳ ಕಾಲ ಪಾಠ ಕಲಿತಿದ್ದ. ತಂದೆ ಶಾಲಾ ಶಿಕ್ಷಕ. ಮಗನ ಕ್ರಿಕೆಟ್ ಹುಚ್ಚು ಅವರಿಗೆ ಹಿಡಿಸಿರಲಿಲ್ಲ. ಕ್ರಿಕೇಟ್ ಮೇಲಿನ ಪ್ರೀತಿಅವರನ್ನು ಕುಮಟಾದಿಂದ ಹುಬ್ಬಳ್ಳಿ ಬಸ್ಸು ಹತ್ತಿಸಿತ್ತು.

ಹುಬ್ಬಳ್ಳಿಯಲ್ಲಿ ಉಳಿದುಕೊಳ್ಳಲು ಯಾವುದೇ ಸಂಬಂಧಿಕರ ಮನೆಯಾಗಲಿ, ಹಾಸ್ಟೆಲ್ ಆಗಲಿ ಇರಲಿಲ್ಲ. ಹೀಗಾಗಿ ಜನಾಶ್ರಯದ ತಾಣಗಳಲ್ಲಿ ತನಗೆ ಉಚಿತ ಆಶ್ರಯ ದೊರೆಯದು ಎಂದು ಅರಿತ ರಘು ಆರಿಸಿಕೊಂಡಿದ್ದು ಸ್ಮಶಾನವನ್ನು. ಕೆಎಸ್ ಸಿಎ ಮೈದಾನದ ಬಳಿಯ ಸ್ಮಶಾನವೇ ರಘುವಿಗೆ ಮನೆ. ಹಗಲು ಮೈದಾನದಲ್ಲಿ ಅಭ್ಯಾಸ ರಾತ್ರಿ ಸ್ಮಶಾನದಲ್ಲಿ ವಾಸ. ಮುಂದಿನ ಹೀಗೆ ನಾಲ್ಕುವರೆ ವರ್ಷ ಸ್ಮಶಾನದ ಚಳಿ- ಮಳೆ- ಬಿಸಿಲು ಯಾವುದೂ ಅಡ್ಡಿಯಾಗಲಿಲ್ಲ ರಘುವಿಗೆ ಅಲ್ಲಿಯೇ ಕಳೆದಿದ್ದ.

ಮುಂದೆ 2011ರಲ್ಲಿ ಟೀಂ ಇಂಡಿಯಾದ ಟ್ರೈನಿಂಗ್ ಅಸಿಸ್ಟೆಂಟ್ ಆಗಿ ರಘು ಆಯ್ಕೆಯಾದ. ಆಟಗಾರರಿಗೆ ಥ್ರೋ ಬೌಲಿಂಗ್ ಮಾಡುವುದು ರಘುವಿನ ಪ್ರಮುಖ ಕೆಲಸವಾಯಿತು. ರಘು ಎಸೆಯುವ 150ರಿಂದ 155 ಕಿ.ಮೀ ವೇಗದ ಬೌಲಿಂಗ್ ನಿಂದ ಟೀಂ ಇಂಡಿಯಾ ಆಟಗಾರರು ಬ್ಯಾಟಿಂಗ್ ಅಭ್ಯಾಸ ನಡೆಸುತ್ತಾರೆ. ಇಷ್ಟೊಂದು ವೇಗದ ಬೌಲಿಂಗ್ ಅನ್ನು ನೆಟ್ ನಲ್ಲಿ ಎದುರಿಸುವ ಕಾರಣ ಮೈದಾನದಲ್ಲಿ ವೇಗಿಗಳನ್ನು ಸುಲಭವಾಗಿ ಎದುರಿಸಬಹುದು ಎನ್ನುವುದು ಕೊಹ್ಲಿ ಮಾತು. ರಘು ಟೀಂ ಇಂಡಿಯಾದ ವಿದೇಶಿ ಬೌಲರ್ ಎಂದು ಧೋನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

TAGGED:cricketis now the main force of Team India! worls cup 2024karnataka boynewsics latest newssports newsThis boy from Kumta
Share This Article
Facebook Twitter Copy Link Print
Previous Article ಸಿಹಿ ಸುದ್ದಿ ಕೊಟ್ಟ ಹರ್ಷಿಕಾ ಪೂಣಚ್ಚ ಭುವನ್, ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಕೊಡಗಿನ ಬೆಡಗಿ
Next Article ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್: ಮೃತದೇಹ ಪತ್ತೆ ಮಾಡಿದ್ದೇ ರೋಚಕ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?