newsics.com
ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಚಂದ್ರಶೇಖರ್ (54) ಹಾಗೂ ಶಾರದಮ್ಮ ಮೃತರು. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ.
ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರುವುದನ್ನು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ ಮಗನ ಬಾಳು ಹೀಗಾಯಿತಲ್ಲ ಎಂದು ನೊಂದುಕೊಂಡಿದ್ದರು.
ಸೋಮವಾರ ಎರಡನೇ ಮಗನನ್ನು ಅಂಗಡಿಗೆ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!
ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!