newsics.com
ರಾಂಚಿ(ಜಾರ್ಖಂಡ್): ಕಳೆದ ನಾಲ್ಕು ತಿಂಗಳಿನಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಮಖ್ಯಮಂತ್ರಿ ಹೇಮಂತ್ ಸೊರೇನ್ ಬಿಡುಗಡೆಯಾಗುತ್ತಿದ್ದಂತೆ ಇತ್ತ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.
ರಾಜೀನಾಮ ಬಳಿಕ ಮಾತನಾಡಿದ ಚಂಪೈ ಸೊರೇನ್, ಕೆಲ ದಿನಗಳ ಕಾಲ ನಾನು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಮಹತ್ತರ ಜವಾಬ್ದಾರಿ ನೀಡಲಾಗಿತ್ತು. ಈ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಇದೀಗ ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿ ಮರಳಿದ್ದಾರೆ. ಮೈತ್ರಿ ಕೂಟ ಪಕ್ಷಗಳು ಒಮ್ಮತದಿಂದ ಈ ನಿರ್ಧಾರ ತೆಗೆದಕೊಂಡಿವೆ. ಎಲ್ಲಾ ನಾಯಕರು ಹೇಮಂತ್ ಸೊರೇನ್ ಅವರನ್ನು ನಮ್ಮ ನಾಯಕನಾಗಿ ಆಯ್ಕೆ ಮಾಡಿದ್ದೇವೆ ಎಂದು ಚಂಪೈ ಸೊರೇನ್ ಹೇಳಿದ್ದಾರೆ.
ಬುಧವಾರ ನಡೆದ ಸಭೆಯಲ್ಲಿ ನಾವು ಹೇಮಂತ್ ಸೊರೇನ್ ಅವರನ್ನು ನಮ್ಮ ನಾಯಕನಾಗಿ ಆಯ್ಕೆ ಮಾಡಿದ್ದೇವೆ. ಗುರುವಾರ(ಜುಲೈ 4) ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ಅದಿಕಾರ ವಹಿಸಿಕೊಳ್ಳಲಿದ್ದಾರೆ.
ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧಿತರಾಗಿದ್ದ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ಗೆ ಸ್ಥಳೀಯ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು. ಬುಧವಾರ ಬಿಡುಗಡೆಯಾಗಿದ್ದಾರೆ. 5 ತಿಂಗಳ ಬಳಿಕ ಸೊರೇನ್ ಬಂಧಮುಕ್ತರಾಗಿದ್ದಾರೆ.
ಸೊರೇನ್ ಅವರ ಜಾಮೀನು ಅರ್ಜಿಯ ಆದೇಶವನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. ವಿಪಕ್ಷಗಳು ಜಾಮೀನು ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿವೆ. ಜಾರ್ಖಂಡ್ನಲ್ಲಿ ಸೊರೇನ್ ಬೆಂಬಲಿಗರು ಸಂಭ್ರಮಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಸೋರೆನ್ ಅವರ ಹಿರಿಯ ವಕೀಲ ಅರುಣಾಭ್ ಚೌಧರಿ, ‘ನ್ಯಾಯಾಲಯವು ಮೇಲ್ನೋಟಕ್ಕೆ ಸೊರೇನ್ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಎಂದು ಮನಗಂಡಿದೆ. ಜಾಮೀನಿನ ಮೇಲೆ ಬಿಡುಗಡೆ ಆದಾಗ ಅವರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ಅಭಿಪ್ರಾಯಪಟ್ಟಿದೆ’ ಎಂದಿದ್ದಾರೆ.
ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?
ವಂದೇ ಭಾರತ್ ರೈಲಿನ ಛಾವಣಿಯಿಂದ ನೀರು ಸೋರಿಕೆ! ಪ್ರಯಾಣಿಕರಿಗೆ ತೊಂದರೆ..