newsics.com
ಉಡುಪಿ: ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡದ ಮಣ್ಣು ಕುಸಿದು ಮಹಿಳೆಯೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಗುರುವಾರ ನಡೆದಿದೆ.
ಅಂಬಾ(55) ಮೃತ ಮಹಿಳೆ. ಹಳ್ಳಿಬೇರು ನಿವಾಸಿಯಾಗಿರುವ ಮೃತ ಮಹಿಳೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೂಲಿ ಕೆಲಸ ಮುಗಿಸಿ ಮನೆಯಲ್ಲಿದ್ದ ವೇಳೆ ಏಕಾಏಕಿ ಗುಡ್ಡದ ಮಣ್ಣು ಕುಸಿದಿದ್ದರಿಂದ ಮಣ್ಣಿನ ರಾಶಿಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟರು. ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ನಡುವೆ, ಉತ್ತರ ಕನ್ನಡ, ಕುಮಟಾ, ಅಂಕೋಲಾ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಎನ್ಡಿಆರ್ಎಫ್(NDRF) ತಂಡ ರವಾನಿಸಲಾಗಿದೆ.
ತಲಾ 35 ಜನರಿರುವ ಎರಡು ತಂಡ ರಚನೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ವ್ಯಾಪ್ತಿಗೆ ರವಾನಿಸಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಇಳಿಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಫಸ್ಟ್ ನೈಟ್ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್ರೂಮ್ಗೆ ಹೋದ ಪತ್ನಿಗೆ ಶಾಕ್
ನಾಳೆ (ಜು.5) ಧ್ರುವ ಯೋಗ, ಸರ್ವಾರ್ಥ ಸಿದ್ಧಿಯೋಗ; ಈ ಐದು ರಾಶಿಯವರಿಗೆ ಅದೃಷ್ಟದ ದಿನ
ದರ್ಶನ್, ಪವಿತ್ರಾ ಗೌಡ ಟೀಮ್ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ