newsics.com
ಕೋಲಾರ: ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ಗುರುವಾರ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಈ ವೇಳೆ ಕ್ಯಾನ್ಸರ್ ಕಾರಕ ಬಣ್ಣ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು.
ಅಲ್ಲದೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗಿದೆ.
ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಕಸದ ಲಾರಿಗೆ ತುಂಬಿಸಿದ್ದಾರೆ.
ಇತ್ತೀಚೆಗಷ್ಟೇ ಕೋಲಾರದ ಕೆಜಿಎಫ್ ನಗರಸಭೆ ಅಧಿಕಾರಿಗಳು ಗೋಬಿ ಮಂಜೂರಿ, ಕಬಾಬ್ ಸೆಂಟರ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವುಗಳಲ್ಲಿ ಬಳಸಲಾಗುತ್ತಿದ್ದ ಬಣ್ಣದ ಪದಾರ್ಥಗಳನ್ನು ಬ್ಯಾನ್ ಮಾಡಿದ್ದರು. ಕಲರ್ ಬಳಸುವ ಎಲ್ಲಾ ಗೋಬಿ ಮಂಚೂರಿ, ಕಬಾಬ್ ಸೆಂಟರ್ಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಸ್ವೀಟ್ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಜತೆ ಟೀಂ ಇಂಡಿಯಾ ಸಂಭ್ರಮ: ಗೆಲುವಿನ ಕ್ಷಣ ಅನಾವರಣ, ವಿಡಿಯೋ ನೋಡಿ
ದರ್ಶನ್ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ