Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ
ಕರ್ನಾಟಕಪ್ರಮುಖ

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

Share
2 Min Read
SHARE

newsics.com
ಬೆಂಗಳೂರು: ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಭಾಗದ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮನೆ, ತೋಟಗಳಿಗೆ ನೀರು ನುಗ್ಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಈ ಪ್ರದೇಶಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಸಂಬಂಧಿ ಅವಘಡಗಳಲ್ಲಿ ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡ ಎಂಬಲ್ಲಿ ಗುಡ್ಡ ಕುಸಿದು ಹಳ್ಳಿ ಬೇರು ನಿವಾಸಿ ಅಂಬಾ(55) ಎಂಬಾಕೆ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ಗದ್ದೆಗೆ ಹೋಗುತ್ತಿದ್ದ ಮಹಿಳೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಬಳಿ ನದಿಗೆ ಮೀನು ಹಿಡಿಯಲು ಹೋದ ಮೈಕಲ್ ಎಂಬುವರು ನೀರು ಪಾಲಾಗಿದ್ದಾರೆ

.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ(ಜುಲೈ 4) 167 ಮಿಮೀ ಮಳೆ ಆಗಿದ್ದು, ನದಿಗಳೆಲ್ಲಾ ಭೋರ್ಗರೆಯುತ್ತಿವೆ. ಗಂಗಾವಳಿ ನದಿ ಅಬ್ಬರಕ್ಕೆ ಅಂಕೋಲ ತಾಲೂಕಿನ ಬಿಳೆಹೊಂಗಿ, ಮಂಜುಗುಣಿ, ಪಣಸಗೊಳಿ, ಹೊನ್ನೆಬೈಲು ಸೇರಿ 5ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಸುರಿದ ವರ್ಷಧಾರೆಗೆ 92 ಮನೆಗಳಿಗೆ ಹಾನಿಯಾಗಿದ್ದು ಓರ್ವ ಮಹಿಳೆ ಮತ್ತು ಜಾನುವಾರು ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ ನೀಡಿದ್ದಾರೆ. ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಮುಂಜಾಗ್ರತಾ ಕ್ರಮವಾಗಿ 35 ಸಿಬ್ಬಂದಿಯ ಎರಡು ಎನ್ಡಿಆರ್‌ಎಫ್ ತಂಡವನ್ನು ರವಾನಿಸಲಾಗಿದೆ. ಈ ತಂಡ ಕಾರವಾರ, ಕುಮಟಾ, ಅಂಕೋಲಾಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿದೆ.
ಉಡುಪಿಯ ರಟ್ಟಾಡಿಯಲ್ಲಿ ಭಾರಿ ಸುಂಟರಗಾಳಿ ಬೀಸಿ 40ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಸುಂಟರಗಾಳಿ ಹೊಡೆತಕ್ಕೆ 5 ಸಾವಿರಕ್ಕೂ ಅಧಿಕ ಅಡಕೆ ಮರಗಳು, 2 ಸಾವಿರ ರಬ್ಬರ್ ಮರಗಳು ನಾಶವಾಗಿವೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವರ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದಾಗ ಕುಟುಂಬದವರು ಹೊರಗೆ ಓಡಿ ಬಂದಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಇಂದಿನ 05-07-2024 ರಾಶಿ‌ ಭವಿಷ್ಯ: ಮಿಥುನ- ಮಿತ್ರರೊಂದಿಗೆ ಭಿನ್ನಾಭಿಪ್ರಾಯ, ಮಕರ- ಉದ್ಯೋಗದಲ್ಲಿ ಕಿರಿಕಿರಿ, ನಿಮ್ಮ ಭವಿಷ್ಯದಲ್ಲೇನಿದೆ?

ಸಾಲ ಬಾಧೆ: ರಾಯಚೂರಿನ ರೈತ ಆತ್ಮಹತ್ಯೆ

ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ‌ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ

ಲೆಹೆಂಗಾ ತೊಟ್ಟು ಹಾಟ್ ಲುಕ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?

ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

TAGGED:Heavy rains in coastal and malnad areas: Three deadlife disrupted
Share This Article
Facebook Twitter Copy Link Print
Previous Article ಪತಿಯ ಕಿರುಕುಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಮಹಿಳೆ!
Next Article ಹಾಸನದಲ್ಲಿ ಮಾರಕ ಡೆಂಗ್ಯೂ ಜ್ವರ ಆರ್ಭಟ: ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?