newsics.com
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಜಿಲ್ಲೆಯ ಕೆಲ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ(ಜುಲೈ 06) ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಆದ್ರೆ, ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್ ಗೆ ರಜೆ ಇಲ್ಲ.ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಉಡುಪಿಯಲ್ಲೂ ಭಾರೀ ಮಳೆಯಾಗುತ್ತಿರುವುದುರಿಂದ ಮುಂಜಾಗ್ರತಾವಾಗಿ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಆದೇಶ ಹೊರಡಿಸಿದ್ದಾರೆ
ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರ ಮುಂದುರಿದಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.