newsics.com
ದಕ್ಷಿಣ ಕನ್ನಡ: ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಬುಧವಾರದಿಂದ ನಿರಂತರವಾಗಿ ಸುರಿದ ಮಳೆಗೆ ಹಲವು ಗ್ರಾಮಗಳು ಜಲಾವೃತಗೊಂಡು ಭಾರೀ ಪ್ರಮಾಣದ ಆಸ್ತಿ ಪಾಸ್ತಿಗೆ ಹಾನಿಯಾಗಿದೆ.
ಬೈಂದೂರು ಕ್ಷೇತ್ರದ ನಾವುಂದ ಸಾಲ್ಬುಡ ಮತ್ತು ಕಾವ್ರಾಡಿ ಭಾಗದ ಹತ್ತಾರು ಹಳ್ಳಿಗಳು ನೆರೆಪ್ರಕೋಪಕ್ಕೆ ನಲುಗಿವೆ. ಸಾವಿರಾರು ಎಕರೆ ಕೃಷಿಭೂಮಿ, ಕೃಷಿತೋಟ ಜಲಾವೃತಗೊಂಡಿದೆ.
ಮಾರಣಕಟ್ಟೆಯ ಬ್ರಹ್ಮಗುಂಡಿ, ಕಮಲಶಿಲೆಯ ಕುಬ್ಜಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬ್ರಹ್ಮಗುಂಡಿ ನದಿ ಉಕ್ಕಿ ಹರಿದು ಮಾರಣಕಟ್ಟೆ ದೇವಳ ಪ್ರವೇಶಿಸಿದೆ. ಬಾಂಡ್ಯ ಸನಿಹದ ಹಾರ್ಮಣ್ಣು ಸಂಪರ್ಕ ಸೇತುವೆ ಮುಳುಗಿದ್ದು ಸಂಪರ್ಕ ಸಂಕಷ್ಟ ಎದುರಾಗಿದೆ.
ವಂಡ್ಸೆ ವ್ಯಾಪ್ತಿಯಲ್ಲಿ ನೂರಾರು ಎಕರೆ ಕೃಷಿಭೂಮಿ ಜಲಾವ್ರತಗೊಂಡಿದೆ. ಸೌಕೂರು ಸನಿಹದ ಕುಚ್ಚಟ್ಟು ಎಂಬಲ್ಲಿ ಹತ್ತಾರು ಮನೆಗಳು ಜಲಬಂಧಿಯಾಗಿವೆ. ಬೆಳ್ಳಾಲ ಮೂಡುಮುಂದ ಎಂಬಲ್ಲಿ ಮುಖ್ಯರಸ್ತೆ ನೀರಿನಲ್ಲಿ ಮುಳುಗಿದ್ದು ಸಂಚಾರ ಸಂಕಷ್ಟ ಉಂಟಾಗಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ