newsics.com
ಒಡಿಶಾ: ಪುರಿ ನಗರದಲ್ಲಿರುವ ಐತಿಹಾಸಿಕ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತವಾಗಿ ಭಕ್ತಾಧಿ ಒಬ್ಬರು ಮೃತಪಟ್ಟಿದ್ದು ಮತ್ತು 300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವುದಾಗಿ ವರದಿ ಆಗಿದೆ.
ಸದ್ಯ ಗಾಯಾಳುಗಳನ್ನು ಪುರಿ ಜಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಭಗವಾನ್ ಜಗನ್ನಾಥನ ಭವ್ಯ ರಥಯಾತ್ರೆ ಭಾನುವಾರ ಆರಂಭಗೊಂಡಿದ್ದು, ದೇಶಾದ್ಯಂತ ಭಕ್ತರು ಭಾಗಿಯಾಗುತ್ತಾರೆ.
ಘಟನೆ ಬಳಿಕ ಭಕ್ತನನ್ನು ತಕ್ಷಣವೇ ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಅಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಮೃತ ಭಕ್ತ ಯಾರೆಂದು ತಿಳಿದುಬಂದಿಲ್ಲ. ಸದ್ಯ ಗಾಯಾಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.