newsics.com
ವಿಜಯನಗರ :ಮಾನಸಿಕ ಖಿನ್ನತೆಗೆ ಜಾರಿದ್ದ ಆಟೋ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ.
ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದ.
ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವ ಡೆತ್ನೋಟ್ ಸಿಕ್ಕಿದೆ. ಮೃತನ ತಮ್ಮನ ದೂರಿನ ಅನ್ವಯ ಕೊಟ್ಟೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.