newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿಯ ಬಿಡುಗಡೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೇವಿಯ ಮೊರೆ ಹೋಗಿದ್ದಾರೆ.
ಆಷಾಢ ಶನಿವಾರದ ಮಧ್ಯಾಹ್ನ ಬಂಡೆ ಮಹಾಕಾಳಿ ದೇಗುಲದಲ್ಲಿ (Shri Bande Mahakali Temple) ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೂಜೆ ಮಾಡಿದ್ದಾರೆ.
ದರ್ಶನ್ ಪರಪ್ಪನ ಅಗ್ರಹಾರ ಸೇರಿದ ನಂತರ ವಿಜಯಲಕ್ಷ್ಮಿ ಅವರು ಕೆಲ ದಿನಗಳ ಹಿಂದೆ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ್ ಅವರನ್ನು ಬಿಡುಗಡೆ ಮಾಡಿಸಲು ಪತ್ನಿ ವಿಜಯಲಕ್ಷ್ಮೀ ಇನ್ನಿಲ್ಲದ ಪ್ರಯತ್ನ ಮಾಡುತ್ತಲೇ ಇದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಅವರು ದರ್ಶನ್ ಪರವಾಗಿ ಇತ್ತೀಚೆಗೆ ಪೋಸ್ಟ್ ಮಾಡಿದ್ದರು. ನನಗೆ ಗೊತ್ತಿದೆ ಮುಂದೆ ನನ್ನ ಪತಿಗೆ ಒಳ್ಳೆಯ ದಿನಗಳು ಬಂದೇ ಬರುತ್ತವೆ. ಆದರೆ ತಾವು ಈ ಪ್ರಕರಣದಿಂದ ಯಾವುದೇ ಉದ್ವೇಗಕ್ಕೆ ಒಳಗಾಗಬೇಡಿ. ನಿಮ್ಮ ಶಾಂತ ಸ್ವಭಾವವೇ ನಮ್ಮ ದೊಡ್ಡ ಶಕ್ತಿ. ಈ ಕೆಟ್ಟ ಘಳಿಗೆಯೂ ಹೋಗಲಿದೆ, ಸತ್ಯ ಮೇಲುಗೈ ಸಾಧಿಸಲಿದೆ ಎಂದು ಮನವಿ ಮಾಡಿದ್ದರು.
ಕುಲ್ಗಾಮ್ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್ಕೌಂಟರ್, ಇಬ್ಬರು ಯೋಧರು ಹುತಾತ್ಮ
2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ
ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ
ಸದ್ದಿಲ್ಲದೆ ಕೃಷಿ ಪಂಪ್ಸೆಟ್ಗೆ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ: ರೈತರಿಗೆ ಸಬ್ಸಿಡಿ ಕೈತಪ್ಪುವ ಆತಂಕ