newsics.com
ಮಾಸ್ಕೋ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರ ಮಾತುಕತೆಯ ಫಲವಾಗಿ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು ದೊರೆತಿದೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಅನಗತ್ಯವಾಗಿ ರಷ್ಯಾ ಪರವಾಗಿ ದುಡಿಯುತ್ತಿರುವ ಭಾರತ ಮೂಲದ ಸೈನಿಕರನ್ನು ಶೀಘ್ರವೇ ಬಿಡುಗಡೆಗೊಳಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ.
ರಷ್ಯಾದ ಸೇನೆಗಾಗಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರನ್ನು ರಷ್ಯಾ ಬಿಡುಗಡೆ ಮಾಡುತ್ತದೆ ಮತ್ತು ಹಿಂದಿರುಗಲು ನೆರವು ನೀಡುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ಮೂಲಗಳ ಪ್ರಕಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಿ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಸೋಮವಾರ ಮಾಸ್ಕೋದ ಅಧ್ಯಕ್ಷರ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ್ದರು. ಪುಟಿನ್ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು ಮತ್ತು ಉಭಯ ನಾಯಕರು ಪರಸ್ಪರ ಆಲಂಗಿಸಿಕೊಂಡು ಉಭಯ ಕುಶಲೋಪರಿ ವಿಚಾರಿಸಿದ್ದರು.
ಸಭೆಗೆ ತೆರಳುವ ಮುನ್ನ ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಆತ್ಮೀಯವಾಗಿ ಶುಭಾಶಯ ಕೋರಿದರು. ಅವರು ಖಾಸಗಿ ಸಭೆ ಮತ್ತು ರಾತ್ರಿಯ ಊಟವನ್ನೂ ಸಹ ಮಾಡಿದ್ದಾರೆ.
ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಈ ಸಂಜೆ ನೊವೊ-ಒಗರಿಯೋವೊದಲ್ಲಿ ನನಗೆ ಆತಿಥ್ಯ ವಹಿಸಿದ್ದಕ್ಕಾಗಿ ಅಧ್ಯಕ್ಷ ಪುಟಿನ್ ಅವರಿಗೆ ಕೃತಜ್ಞತೆಗಳು. ನಾಳೆಯೂ ನಮ್ಮ ಮಾತುಕತೆಗಳನ್ನು ಎದುರು ನೋಡುತ್ತಿದ್ದೇವೆ. ಇದು ಭಾರತ ಮತ್ತು ರಷ್ಯಾ ನಡುವಿನ ಸ್ನೇಹದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಖಂಡಿತವಾಗಿಯೂ ಬಹಳ ದೂರ ಹೋಗುತ್ತದೆ ಎಂದು ಹೇಳಿದ್ದಾರೆ.
https://x.com/narendramodi/status/1810368302176190843?t=6SZfHqCewZSv2EG1gg7EBA&s=19
ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ