newsics.com
ಬೆಂಗಳೂರು: ಸದ್ಯಕ್ಕಂತೂ ನಟ ದರ್ಶನ್ಗೆ ಜೈಲೂಟವೇ ಗತಿ ಎನ್ನುವುದು ಸ್ಪಷ್ಟವಾಗಿದೆ.
ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು.
ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ಬುಧವಾರ ವಿಚಾರಣೆ ನಡೆಯಿತು. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆಯೇ ಪರಿಗಣಿಸಲಾಗುವುದು’ ಎಂದು ನ್ಯಾ. ಕೃಷ್ಣಕುಮಾರ್ ಹೇಳಿದ್ದಾರೆ
ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಾಡಿದ್ದಾರೆ. ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಾಡಿದ್ದಾರೆ.
ಈ ವಾದದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು, ‘ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಕೋರಿದ್ದೀರಿ. ಈ ಬಗ್ಗೆ ಈ ಹಿಂದಿನ ಕೋರ್ಟ್ ತೀರ್ಪುಗಳಿವೆಯೇ? ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ? ಜೈಲು ಅಧಿಕಾರಿಗಳಿಗೆ ನೀವು ಮನವಿ ಮಾಡಿದ್ದೀರಿ. ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸದೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದೇ? ಕೈದಿಗಳಿಗಿರುವ ಕಾನೂನು ಈ ಬಗ್ಗೆ ಏನು ಹೇಳುತ್ತದೆ’ ಎಂದು ಪ್ರಶ್ನೆ ಮಾಡಿದ್ದಾರೆ.
ಬೇರೆ ಪ್ರಕರಣಗಳಂತೆಯೇ ಇದನ್ನೂ ಪರಿಗಣಿಸಲಾಗುವುದು. ಕಾನೂನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಕೃಷ್ಣಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ.
ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ
ಡಬಲ್ ಡೆಕ್ಕರ್ ಬಸ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ
ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ