newsics.com
ಅಸ್ಸಾಂ :ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿಯಾಗಿದೆ. ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟ ಹೃದಯ ವಿದ್ರಾವಕ ವಿಡಿಯೋ ಎಂತವರ ಕಣ್ಣಲ್ಲಿ ಕಣ್ಣೀರು ಜಿನುಗಿಸುತ್ತದೆ.ಅಸ್ಸಾನಂ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ಈ ಘಟನೆ ನಡೆದಿದೆ.
ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಆನೆ ಗಂಭೀರವಾಗಿ ಗಾಯಗೊಂಡಿದೆ. ಎರಡೂ ಕಾಲುಗಳನ್ನು ಕಳೆದುಕೊಂಡಿದೆ.
ತೀವ್ರ ನೋವು, ರಕ್ತ ಸ್ರಾವದ ನಡುವೆ ಹಳಿಯ ನಡುವೆ ತೆವಳುತ್ತಾ ಸಾಗಿದ ಆನೆ ಕೊನೆಗೆ ಪ್ರಾಣ ಬಿಟ್ಟಿದೆ. ಈ ವಿಡಿಯೋ ಎಂತವರ ಕಣ್ಣಲ್ಲಿ ಕಣ್ಣೀರಿ ಜಿನುಗಿಸುತ್ತೆ. ಈ ವಿಡಿಯೋ ಹಂಚಿಕೊಂಡು ಸಂಬಂಧ ಪಟ್ಟ ಅಧಿಕಾರಿಗಳು ವನ್ಯ ಪ್ರಾಣಿಗಳ ಪ್ರಾಣ ಉಳಿಸಲು ಏನಾದರು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದು ಕೆಕೆಆರ್ ಸ್ಟಾರ್ ಕ್ರಿಕೆಟಿಗ ವರುಣ್ ಚಕ್ರವರ್ಥಿ ಅಗ್ರಹಿಸಿದ್ದಾರೆ.