Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಗೌರವಗಳೊಂದಿಗೆ ಅಪರ್ಣಾಗೆ ಭಾವಫೂರ್ಣ ವಿದಾಯ, ಮಧುರ ಶಾರೀರದ ಶರೀರ ಪಂಚಭೂತಗಳಲ್ಲಿ ಲೀನ
ಕರ್ನಾಟಕಪ್ರಮುಖಮನರಂಜನೆ

ಸರ್ಕಾರಿ ಗೌರವಗಳೊಂದಿಗೆ ಅಪರ್ಣಾಗೆ ಭಾವಫೂರ್ಣ ವಿದಾಯ, ಮಧುರ ಶಾರೀರದ ಶರೀರ ಪಂಚಭೂತಗಳಲ್ಲಿ ಲೀನ

Share
2 Min Read
SHARE

newsics.com

ಬೆಂಗಳೂರು: ಗುರುವಾರ ರಾತ್ರಿ ನಿಧನರಾದ ಖ್ಯಾತ ನಿರೂಪಕಿ,‌ ನಟಿ ಅಪರ್ಣಾ ವಸ್ತಾರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಅಪರ್ಣಾ ಅವರಿಗೆ ಸರ್ಕಾರಿ ಗೌರವ ನೀಡಲಾಯಿತು.

ಕಳೆದ ಎರಡು ವರ್ಷಗಳಿಂದ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬನಶಂಕರಿ ಎರಡನೇ ಹಂತದ ತಮ್ಮ ಮನೆಯಲ್ಲಿ ಗುರುವಾರ ರಾತ್ರಿ ಅಪರ್ಣಾ ಕೊನೆಯುಸಿರೆಳೆದರು.

ಅಂತ್ಯಕ್ರಿಯೆ ವೇಳೆಯೂ ಅಂತಿಮ ದರ್ಶನಕ್ಕೆಂದು ಬನಶಂಕರಿ ಚಿತಾಗಾರಕ್ಕೆ ಅಭಿಮಾನಿಗಳು ಓಡೋಡಿ‌ ಬಂದಿದ್ದರಿಂದ ಅಂತ್ಯಕ್ರಿಯೆ ತುಸು‌ ವಿಳಂಬವಾಯಿತು.

ನಟಿ, ನಿರೂಪಕಿ ಅಪರ್ಣಾ ಬಣ್ಣದ ಲೋಕದ ಮೇಲಿನ ಸೆಳೆತದಿಂದ ನಟನಾರಂಗಕ್ಕೆ ಆಗಮಿಸಿದ್ದರು. 1985ರಲ್ಲಿ ತೆರೆಗೆ ಬಂದ ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ಮಸಣದ ಹೂವು ಸಿನಿಮಾ ಮೂಲಕ ಚಂದನವನಕ್ಕೆ ಆಗಮಿಸಿದ್ದರು ಅಪರ್ಣಾ. ಅದಾದ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಕಿರುತೆರೆಯಲ್ಲಿಯೂ ಗುರುತಿಸಿಕೊಂಡರು. ಆದರೆ, ಸಿನಿಮಾಗಳಿಗಿಂತ ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ನಿರೂಪಣೆ. ಸರಿಸುಮಾರು 7 ಸಾವಿರಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದ ಹೆಗ್ಗಳಿಕೆ ಅಪರ್ಣಾ ಅವರದ್ದು.

ಅಪರ್ಣಾ ಮೂಲತಃ ಚಿಕ್ಕಮಗಳೂರಿನ ಪಂಚನಹಳ್ಳಿಯವರು. ತಂದೆ ಕೆ. ಎಸ್.‌ ನಾರಾಯಣಸ್ವಾಮಿ ಸಿನಿಮಾ ಪತ್ರಕರ್ತ. ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಅಪರ್ಣಾ, ಚಿಕ್ಕಂದಿನಿಂದಲೇ ಓದಿನಲ್ಲಿ ಮುಂದು. ಶಾಲಾ ದಿನಗಳಲ್ಲಿಯೇ ವೇದಿಕೆ ಕಾರ್ಯಕ್ರಮಗಳನ್ನು ನಿಭಾಯಿಸುತ್ತಿದ್ದರು. ನಿರೂಪಣೆಯ ಜವಾಬ್ದಾರಿ ಹೊತ್ತಿದ್ದರು. ಅಂದಿನ ಆ ರೂಢಿಯೇ ಅವರ ಅನ್ನಕ್ಕೆ ದಾರಿ ಮಾಡಿಕೊಟ್ಟಿತ್ತು. ತಂದೆಯ ನಿಧನದ ಬಳಿಕ ಬೆಂಗಳೂರಿನ ಮಲ್ಲೇಶ್ವರಕ್ಕೆ ಬಂದು ನೆಲೆನಿಂತರು. ಅದಾದ ಮೇಲೆ ನಾಗರಾಜ್‌ ವಸ್ತಾರೆ ಜತೆಗೆ ವಿವಾಹವೂ ಆಯ್ತು. ಆದರೆ, ಈ ಜೋಡಿಗೆ ಮಕ್ಕಳಾಗಿಲ್ಲ. ಆ ಕೊರಗೂ ಅಪರ್ಣಾ ಅವರನ್ನು ಕಾಡಿತ್ತು.

ಬರುವ ಅಕ್ಟೋಬರ್‌ಗೆ 58 ವರ್ಷ ಪೂರೈಸುತ್ತಿದ್ದ ಅಪರ್ಣಾಗೆ, ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದರು. ನಿರೂಪಣೆಯಲ್ಲಿ ದೊಡ್ಡ ಹೆಸರು ಮಾಡಿದ್ದ ಅಪರ್ಣಾ, ಅದೇ ನಿರೂಪಣೆ ಕಲೆಯನ್ನು ಇತರರಿಗೂ ಹಂಚಲು ಪ್ಲಾನ್‌ ಮಾಡಿದ್ದರು. ನಿರೂಪಣೆ ಕುರಿತು ಶಾಲೆ ಆರಂಭಿಸುವ ಯೋಜನೆ ಹಾಕಿದ್ದರು. ಆದರೆ, ಆ ಕನಸು ಕೊನೆಗೂ ಈಡೇರಲಿಲ್ಲ. ಈ ವಿಚಾರವನ್ನು ಅವರ ಪತಿ ನಾಗರಾಜ್‌ ಹೇಳಿಕೊಂಡಿದ್ದಾರೆ.

ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…

ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

TAGGED:A heartwarming farewell to Aparna with government honoursthe narrator is engrossed in panchabhutas
Share This Article
Facebook Twitter Copy Link Print
Previous Article ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…
Next Article ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್

Popular Posts

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

You Might Also Like

ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?