newsics.com
ಕಠ್ಮಂಡು: ಭಾರೀ ಮಳೆಯಿಂದಾಗಿ ನೇಪಾಳದಲ್ಲಿ ಭೂಕುಸಿತ ಉಂಟಾಗಿದ್ದು, ಎರಡು ಬಸ್ಗಳು ನದಿಗೆ ಉರುಳಿವೆ. 63 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ಮದನ್-ಆಶೀರ್ ಹೆದ್ದಾರಿಯಲ್ಲಿ ಈ ಭೂಕುಸಿತ ಸಂಭವಿಸಿದೆ. ಈ ವೇಳೆ ಎರಡು ಬಸ್ಗಳು ಅವಶೇಷಗಳಡಿ ಸಿಲುಕಿ ತ್ರಿಶೂಲಿ ನದಿಯಲ್ಲಿ ಕೊಚ್ಚಿ ಹೋಗಿವೆ.
ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಚಿತ್ವಾನ್ ಮುಖ್ಯ ಜಿಲ್ಲಾ ಅಧಿಕಾರಿ ಇಂದ್ರದೇವ್ ಯಾದವ್ ಹೇಳಿದ್ದಾರೆ.
ಅಪಘಾತಕ್ಕೀಡಾದ ಒಂದು ಬಸ್ ಬಿರ್ಗಂಜ್ನಿಂದ ಕಠ್ಮಂಡುವಿಗೆ ಹೋಗುತ್ತಿತ್ತು. ಇನ್ನೊಂದು ಬಸ್ ಗೌರ್ನಿಂದ ಕಠ್ಮಂಡುವಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ.
ಪರ್ವತದ ಮೇಲೆ ಭೂಕುಸಿತದಿಂದ ಈ ಅವಘಡ ಸಂಭವಿಸಿದೆ. ನಾರಾಯಣಘಟ್ಟ ಮತ್ತು ಮುಗ್ಲಿಂಗ್ ನಡುವೆ ಈ ಘಟನೆ ನಡೆದಿದೆ
.
ಅಪಘಾತದಲ್ಲಿ ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಮೃತಪಟ್ಟವರಲ್ಲಿ ಹಲವು ಭಾರತೀಯರೂ ಇದ್ದಾರೆ ಎನ್ನಲಾಗಿದೆ. ಭೂಕುಸಿತ ಸಂಭವಿಸಿದಾಗ ಬಸ್ಗಳು ಹೆದ್ದಾರಿಯಲ್ಲಿ ಚಲಿಸುತ್ತಿದ್ದವು. ಬಳಿಕ ಮಣ್ಣಿನ ಅವಶೇಷಗಳಡಿ ಸಿಲುಕಿ ನದಿಗೆ ಬಿದ್ದಿವೆ.
ಭೂಕುಸಿತದಿಂದ ರಸ್ತೆ ಮಧ್ಯದಲ್ಲಿಯೇ ಅವಶೇಷಗಳು ಶೇಖರಣೆಗೊಂಡು ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಪ್ರಯಾಣಿಕರನ್ನು ಹುಡುಕಲು ಮತ್ತು ರಕ್ಷಿಸಲು ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಬಾರಿ ಮುಂಗಾರು ಆರಂಭವಾದಾಗಿನಿಂದ ನೇಪಾಳದಲ್ಲಿ 62 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 90 ಜನರು ಗಾಯಗೊಂಡಿದ್ದಾರೆ. ಅಲ್ಲಿ ಸುರಿದ ಭಾರೀ ಮಳೆಗೆ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ.
ಕನಿಷ್ಠ 121 ಮನೆಗಳು ಮುಳುಗಿವೆ ಮತ್ತು 82 ಇತರವುಗಳಿಗೆ ಹಾನಿಯಾಗಿದೆ. ದೇಶಾದ್ಯಂತ ಒಟ್ಟು 1,058 ಕುಟುಂಬಗಳನ್ನು ಸ್ಥಳಾಂತರಿಸಿವೆ.
ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ಜತೆ ಹೋರಾಡಿದ್ದ ಅಪರ್ಣಾ ಧೀರೆ… ಪತಿ ನಾಗರಾಜ್ ವಸ್ತಾರೆ ಕಂಬನಿ