newsics.com
ಹೈದ್ರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಬೆಂಗಳೂರಿನಿಂದ ಹೋದ ಮಹಿಳೆಯ ತಲೆ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು, ಅಲ್ಲಿಯೇ ಮೂರ್ಛೆ ಹೋಗಿ ಬಿದ್ದಿದ್ದಾಳೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತಿರುಪತಿ ದರ್ಶನಕ್ಕೆ ಹೋದ ಮಹಿಳೆ ತಲೆ ಮೇಲೆ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದಾಳೆ.
ಬೆಂಗಳೂರು ಗ್ರಾಮಾಂತರ ಆನೆಕಲ್ ಬಳಿಯ ಹಾರಗದ್ದೆ ನಿವಾಸಿ ಉಮಾರಾಣಿ (54) ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ.
ಈ ಘಟನೆ ಕಳೆದ ಮೂರು ದಿನಗಳ ಹಿಂದೆ ಅಂದರೆ ಜು.10ರ ಸಂಜೆ ವೇಳೆ ನಡೆದಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ, ಆಂಜನೇಯಸ್ವಾಮಿ ದರ್ಶನಕ್ಕೆ ತೆರುಳುತ್ತಿದ್ದ ಉಮಾರಾಣಿಯ ತಲೆ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿದೆ.
ಮರದ ಕೊಂಬೆ ತಲೆಯ ಮೇಲೆ ಬೀಳುತ್ತಿದ್ದಂತೆ ಮಹಿಳೆ ಸ್ಥಳದಲ್ಲಿಯೇ ರಕ್ತಸ್ರಾವಗೊಂಡು ಕುಸಿದು ಬಿದ್ದಿದ್ದಾಳೆ. ದೇವಸ್ಥಾನಕ್ಕೆ ಬಂದಿದ್ದ ಇತರೆ ಭಕ್ತಾದಿಗಳು ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಿಳೆಯನ್ನು ಟಿಟಿಡಿ ಮಂಡಳಿಯ ಸಿಬ್ಬಂದಿ ಸ್ಥಳೀಯ ಟಿಟಿಡಿ ಪದ್ಮಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
A branch of tree fell on a women in Tirumala at Anjaneyaswamy Japali Kshetra. She is severely injured head and spinal,she's shifted to Hospital #Tirupati #Tirumala #Tree #Injured pic.twitter.com/v0kksio4NA
— Saravanan Journalist (@Saranjournalist) July 12, 2024
AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು BMRCL ಚಿಂತನೆ
ಆನೆಯ ಡೆಡ್ಲಿ ಅಟ್ಯಾಕ್ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್