Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ
ಕರ್ನಾಟಕಪ್ರಮುಖ

ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ

Share
2 Min Read
SHARE

newsics.com

ಬೆಂಗಳೂರು: ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿ, ಪಾನಿಪೂರಿ, ಕಬಾಬ್‌ ಹಾಗೂ ಶವರ್ಮಾದಲ್ಲಿ ಕೃತಕ ಬಣ್ಣ ನಿಷೇಧಿಸಿದ ಬೆನ್ನಲ್ಲೇ ಇದೀಗ ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆಯಾಗಿದೆ.

ರಸ್ತೆ ಬದಿಯ ಅಂಗಡಿಗಳಲ್ಲಿ ಸಿಗುವ ಚಹಾವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಪರೀಕ್ಷೆಗೊಳಪಡಿಸಿದ್ದು, ಚಹಾದಲ್ಲಿ ಅಧಿಕ ಪ್ರಮಾಣದ ಕೀಟನಾಶಕ ಮತ್ತು ಬಣ್ಣವನ್ನು ಬಳಸುವುದನ್ನು ಪತ್ತೆ ಹಚ್ಚಿದೆ
ಕಬಾಬ್‌, ಗೋಬಿ ಮಂಚೂರಿ, ಶವರ್ಮಾ, ಚಹಾ ಸೇರಿದಂತೆ ಬಹುತೇಕ ಆಹಾರ ಪದಾರ್ಥಗಳಲ್ಲಿ ರುಚಿ ಮತ್ತು ಬಣ್ಣ ಹೆಚ್ಚಿಸಲು ಕೀಟನಾಶಕ ಮತ್ತು ರಸಗೊಬ್ಬರಗಳಲ್ಲಿ ಬಳಸುವ ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಈ ಅಂಶಗಳು ಕ್ಯಾನ್ಸರ್‌ ಗೆ ಕಾರಣವಾಗುತ್ತವೆ.
ಚಹಾ ತೋಟಗಳಲ್ಲೇ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೀಟನಾಶಕಗಳನ್ನು ಬಳಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಟೀ ತೋಟಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಅಧಿಕ ಪ್ರಮಾಣದ ಕೀಟನಾಶಕ ಬಳಕೆಯಿಂದ ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವುದು ಸರ್ಕಾರದ ಆತಂಕವಾಗಿದೆ.
ಚಹಾವನ್ನು ಅತಿ ಹೆಚ್ಚು ಬಳಸುವ ಉತ್ತರ ಕರ್ನಾಟಕದ ಚಹಾ ಅಂಗಡಿಗಳಿಂದ 48 ಸ್ಯಾಂಪಲ್‌‌ಗಳನ್ನು ಸಂಗ್ರಹಿಸಲಾಗಿದೆ.

ಬಾಗಲಕೋಟೆ, ಬೀದರ್‌, ಗದಗ, ವಿಜಯನಗರ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಈ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗೊಳಪಡಿಸಿದಾಗ ಅಧಿಕ ಪ್ರಮಾಣದ ಕೀಟನಾಶಕಗಳನ್ನು ಬೆರೆಸಿರುವುದು ಪತ್ತೆಯಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಚಹಾ ಉತ್ಪಾದಕರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದ್ದೇವೆ. ಗ್ರಾಹಕರು ಕಳಪೆ ಗುಣಮಟ್ಟದ ಅಥವಾ ಭಾರೀ ಪ್ರಮಾಣದಲ್ಲಿ ಸಂಸ್ಕರಿಸಿದ ಆಹಾರ ಪದಾರ್ಥಗಳನ್ನು ಸೇವಿಸಬಾರದು ಮತ್ತು ಗುಣಮಟ್ಟದ ಆಹಾರವನ್ನು ಬಳಸಬೇಕು ಎನ್ನುವುದು ನಮ್ಮ ಉದ್ದೇಶ. ಬಣ್ಣ ಮತ್ತು ರುಚಿ ಹೆಚ್ಚಿಸಲು ಬಳಸುವ ರಾಸಾಯನಿಕಗಳನ್ನು ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ನಮ್ಮ ಕಾಳಜಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
ಚಹಾ ತೋಟಗಳ ಮಾಲೀಕರು ಮತ್ತು ಚಹಾ ಸಂಸ್ಕರಣೆ ಮಾಡುವವರಿಬ್ಬರೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೀಟನಾಶಕ ಮತ್ತು ರಾಸಾಯನಿಕಗಳನ್ನು ಬಳಸುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದರು.
ಚಹಾ ತೋಟಗಳಲ್ಲೇ ಅಧಿಕ ಪ್ರಮಾಣದ ಅಧಿಕ ಪ್ರಮಾಣದ ರಾಸಾಯನಿಕಗಳನ್ನು ಬಳಸುವುದು ಪ್ರಯೋಗಾಲಯಗಳ ಪರೀಕ್ಷೆಗಳಿಂದ ದೃಢಪಟ್ಟಿದೆ. ತುಸು ಹೆಚ್ಚೇ ಅನ್ನಿಸುವುಷ್ಟು ರಾಸಾಯನಿಕಗಳನ್ನು ಬಳಸಲಾಗಿದೆ. ಆದ್ದರಿಂದ ಚಹಾದಲ್ಲಿ ಕೀಟನಾಶಕ ಬಳಕೆಯನ್ನು ನಿಯಂತ್ರಿಸಲು ಅಭಿಯಾನ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್

ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ

ದಿನ‌ ಭವಿಷ್ಯ 15-07-2024 … ಮಿಥುನ- ಆದಾಯಕ್ಕಿಂತ ಹೆಚ್ಚು ಖರ್ಚು, ತುಲಾ- ಸ್ನೇಹಿತರಿಂದ ಅನಿರೀಕ್ಷಿತ ಸಹಾಯ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ

46 ವರ್ಷ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ, ವಿಡಿಯೋ‌ ನೋಡಿ

ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ

ಸ್ಟೈಲಿಷ್ ರೆಡ್ ಗೌನ್ನಲ್ಲಿ ಹಾಟ್ ಪೋಸ್ ಕೊಟ್ಟ  ನಭಾ ನಟೇಶ್‌

ಪುರಿ ಜಗನ್ನಾಥನ ರತ್ನ ಭಂಡಾರದ ಬಾಗಿಲಿನ ಮುಂದೆ ಮೂರ್ಛೆ ಹೋದ  ಎಸ್‌ಪಿ!

ಜೈಲಿನಲ್ಲಿ ದರ್ಶನ್ ಗೆ ಕಾಡ್ತಿದೆ ಒಂಟಿತನ, ಮಾನಸಿಕ ಖಿನ್ನತೆ! ಯೋಗದ ಮೋರೆ ಹೋದ ದಚ್ಚು

TAGGED:Harmful elements found in tea Govt thinking of banning use of pesticides dyes in tea plantations newsics ಚಹಾ ಹಾನಿಕಾರಕ ಅಂಶ ಕೀಟನಾಶಕ ಬಣ್ಣ
Share This Article
Facebook Twitter Copy Link Print
Previous Article ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್
Next Article ಮನೆಯಲ್ಲಿ ಅಗ್ನಿ ಅವಘಡ: ಉಡುಪಿ ಬಾರ್ ಮಾಲೀಕ ಸಾವು, ಪತ್ನಿ, ಮಕ್ಕಳಿಬ್ಬರು ಪಾರು

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?