newsics.com
ಬೆಂಗಳೂರು : ಬಾರಿ ಮಳೆ ಹಿನ್ನಲೆಯಲ್ಲಿ ನಾಳೆ(ಜುಲೈ 16) ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜನರನ್ನು ಹೊರಗೆ ಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇದರಿಂದ ಕೆಲವೆಡೆ ನದಿ, ಹಳ್ಳ-ಕೊಳ್ಳುಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.