newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ.
ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ಆಯಾ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.
ಕರಾವಳಿ ಪ್ರದೇಶ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕ್ಯಾಸಲ್ರಾಕ್, ಆಗುಂಬೆ, ಕುಮಟಾ, ಗೇರುಸೊಪ್ಪ, ಕದ್ರಾ, ಹೊನ್ನಾವರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಕಾರವಾರ, ಶಿರಾಲಿ, ಗೋಕರ್ಣ, ಮಂಕಿ, ಸಿದ್ದಾಪುರ, ಕಮ್ಮರಡಿ, ನಾಪೊಕ್ಲು, ಜೋಯಿಡಾ, ಕುಂದಾಪುರ, ಸೋಮವಾರಪೇಟೆ, ಕೊಪ್ಪದಲ್ಲಿ ಮಳೆಯಾಗಿದೆ.
ಕೋಟ, ಲೋಂಡಾ, ಜಯಪುರ, ಧರ್ಮಸ್ಥಳ, ಯಲ್ಲಾಪುರ, ಭಾಗಮಂಡಲ, ಹುಂಚದಕಟ್ಟೆ, ಕಳಸ, ಸುಳ್ಯ, ಬನವಾಸಿ, ಕಿರವತ್ತಿ, ಹಳಿಯಾಳ, ಬೆಳ್ತಂಗಡಿ, ಮುಂಡಗೋಡು, ಕುಷ್ಟಗಿ, ಹಾರಂಗಿ, ಎನ್ಆರ್ಪುರ, ತ್ಯಾಗರ್ತಿ, ಬಾಳೆಹೊನ್ನೂರು, ಕಾರ್ಕಳ, ಉಪ್ಪಿನಂಗಡಿ, ಬೆಳಗಾವಿ, ಕೊಟ್ಟಿಗೆಹಾರ, ಮುಲ್ಕಿ, ಪುತ್ತೂರು, ಬಾದಾಮಿ, ಸಂಕೇಶ್ವರ, ಮುದಗಲ್, ರಾಣೆಬೆನ್ನೂರು, ಯಡವಾಡ, ಧಾರವಾಡ, ತರೀಕೆರೆ, ಕುಶಾಲನಗರ, ಸರಗೂರು, ಬಂಡೀಪುರ, ದೊಡ್ಡಬಳ್ಳಾಪುರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ.
ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್
ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ
ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ