newsics.com
ಬೆಂಗಳೂರು : ಗೆಳತಿ ಪವಿತ್ರಾ ಗೌಡ ಅವ್ರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಪ್ರಕಾರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
ಐಷಾರಾಮಿ ಜೀವನ ನಡೆಸಿದ ದರ್ಶನ್ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಪ್ರಮುಖವಾಗಿ ಜೈಲಿನ ಊಟದಿಂದ ದರ್ಶನ್ಗೆ ತೊಂದರೆ ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯ ಸಮಸ್ಯೆ ಕೂಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ.
ಜೈಲು ಊಟ ಸೇವಿಸಿದ್ದರಿಂದ ದರ್ಶನ್ಗೆ ಲೂಸ್ ಮೋಷನ್ ಶುರುವಾಗಿದೆ. ದೇಹದ ತೂಕ ಕಡಿಮೆ ಆಗುತ್ತಿದೆ. ಫಿಟ್ನೆಸ್ ಕೂಡ ಹಾಳಾಗುತ್ತಿದೆ. ಮನೆ ಊಟ ಸೇವಿಸಿದರೆ ಈ ಸಮಸ್ಯೆ ಸರಿ ಆಗಬಹುದು ಎಂಬ ಕಾರಣದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೈಲಿನ ವೈದ್ಯರು ನೀಡುವ ವರದಿ ಆಧಾರದ ಮೇಲೆ ನ್ಯಾಯಾಲಯ ಮುಂದಿನ ಸೂಚನೆ ನೀಡಲಿದೆ.
ಟೊಮೆಟೊ ತೋಟಕ್ಕೆ ದೃಷ್ಟಿಬೊಂಬೆ ಬದಲು ರಚಿತಾ ರಾಮ್, ಸನ್ನಿ ಲಿಯೋನ್ ಫೋಟೋ