newsics.com
ಮಂಗಳೂರು: ಹಿರಿಯ ನಾಟಕಕಾರ, ಚಲನಚಿತ್ರ ರಂಗ ನಿರ್ದೇಶಕ, ಘಟಶ್ರಾದ್ಧ ನಿರ್ಮಾಪಕ ಸದಾನಂದ ಸುವರ್ಣ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು.
ಕನ್ನಡ ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ನಿರ್ದೇಶಿಸಿದ, ಘಟಶ್ರಾದ್ಧ, ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನಿಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟ ರಂಗಭೂಮಿಯ ಹಿರಿಯಜ್ಜ – ಸದಾನಂದ ಸುವರ್ಣ.
ಸ್ವತಃ ನಟ, ನಾಟಕಕಾರನಾಗಿ, ಪ್ರಯೋಗಶೀಲ ನಿರ್ದೇಶಕನಾಗಿ ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಮ್ಮ ಇಳಿವಯಸ್ಸಿನಲ್ಲಿ ಮಂಗಳೂರಿನ ರಂಗಭೂಮಿ ಪ್ರವೇಶಿಸಿ ಅಲ್ಲಿಯೂ ತಮ್ಮ ಸೃಜನಶೀಲ ಪ್ರತಿಭೆಯ ಸುವರ್ಣ ಛಾಪನ್ನು ಒತ್ತಿದ್ದರು.
ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ
ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ, ಮುಂತಾದ ನಾಟಕಗಳನ್ನು ನಿರ್ದೇಶಿಸಿ ಸದಭಿರುಚಿಯ ರಂಗ ಕಾಯಕ ಹೇಗಿರಬೇಕು ಎಂದು ನಿರೂಪಿಸಿದ್ದರು.
ತಾನೂ ಬೆಳೆಯುತ್ತ ನೂರಾರು ಹಿರಿಯ ಕಿರಿಯ ಕಲಾವಿದರನ್ನೂ ಬೆಳೆಸಿದ ಅನನ್ಯ ರಂಗ ತಪಸ್ವಿ ಸದಾನಂದ ಸುವರ್ಣ. ಮುಂಬಯಿ ಮತ್ತು ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಸುವರ್ಣರ ಕೊಡುಗೆ ಅನನ್ಯವಾದುದು.
ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.
ಉಗ್ರರೊಂದಿಗೆ ಗುಂಡಿನ ಚಕಮಕಿ: ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿಕೆ
ಮುಂದಿನ ಮೆಟ್ರೋ ಮಾರ್ಗಗಳಲ್ಲಿ ಅಪರ್ಣಾ ಧ್ವನಿ ಕೇಳಲ್ಲ, ಹೊಸ ವಾಯ್ಸ್ಗಾಗಿ BMRCL ಅಧಿಕಾರಿಗಳಿಂದ ಶೋಧ