Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ನನ್ನ ಮಕ್ಕಳಿಗೆ ಕೆಲಸ ಸಿಗಲ್ವಾ? ಉದ್ಯೋಗ ಮೀಸಲಾತಿ ಕ್ರಮಕ್ಕೆ ಫೋನ್‌ಪೇ ಸಿಇಒ ಸಮೀರ್ ಸಿಡಿಮಿಡಿ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ನನ್ನ ಮಕ್ಕಳಿಗೆ ಕೆಲಸ ಸಿಗಲ್ವಾ? ಉದ್ಯೋಗ ಮೀಸಲಾತಿ ಕ್ರಮಕ್ಕೆ ಫೋನ್‌ಪೇ ಸಿಇಒ ಸಮೀರ್ ಸಿಡಿಮಿಡಿ

Share
1 Min Read
SHARE

newsics.com
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಳ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪೂರ್ಣ ಮೀಸಲಾತಿ ಕೊಡುವ ಪ್ರಸ್ತಾಪಕ್ಕೆ ಹಲವು ಉದ್ಯಮಿಗಳ ತೀವ್ರ ವಿರೋಧ ವ್ಯಕ್ತವಾಗಿದೆ.

ಫೋನ್‌ಪೇ ಸಂಸ್ಥಾಪಕ ಮತ್ತು ಸಿಇಒ ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಅವರು ರಾಜ್ಯ ಸರ್ಕಾರದ ನಡೆಯನ್ನು ಬಲವಾಗಿ ಟೀಕಿಸಿದ್ದಾರೆ.

ನನ್ನ ಮಕ್ಕಳು ತಮ್ಮ ಸ್ವಂತ ಊರಿನಲ್ಲಿ ಕೆಲಸಕ್ಕೆ ಸೇರಲು ಅನರ್ಹರಾ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ರೂಪಿಸಿದ ಮಸೂದೆಯನ್ನು ನಾಚಿಕೆಗೇಡಿನ ಕ್ರಮ ಎಂದು ಬಣ್ಣಿಸಿದ್ದಾರೆ.
ನನಗೆ 46 ವರ್ಷ ವಯಸ್ಸಾಗಿದೆ. ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡಿದ್ದಾರೆ. ದೇಶಾದ್ಯಂತ ಅವರ ಪೋಸ್ಟಿಂಗ್ ಆಗಿದೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗ ಗಳಿಸಲು ಅರ್ಹರಲ್ಲವಾ? ನಾನು ಕಂಪನಿಗಳನ್ನು ಸ್ಥಾಪಿಸಿದ್ದೇನೆ. ದೇಶಾದ್ಯಂತ 25,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ಅವರ ಸ್ವಂತ ನಗರದಲ್ಲಿ ಕೆಲಸ ಮಾಡಲು ಅನರ್ಹರಾ? ಇದು ನಾಚಿಕೆಗೇಡಿತನದ ಸಂಗತಿ’ ಎಂದು ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಉದ್ಯಮಿಗಳ ವಿರೋಧಕ್ಕೆ ಬೆಚ್ಚಿದ ಸಿಎಂ ಸಿದ್ದರಾಮಯ್ಯ, ‘ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಹರ್ಯಾಣ ಮೊದಲಾದ ಕೆಲ ರಾಜ್ಯಗಳು ಇದೇ ರೀತಿಯಲ್ಲಿ ಸ್ಥಳೀಯರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕೊಡುವ ಪ್ರಯತ್ನ ಮಾಡಿದ್ದವು. ನ್ಯಾಯಾಲಯಗಳಲ್ಲಿ ಇವುಗಳಿಗೆ ಬೆಂಬಲ ಸಿಕ್ಕಿಲ್ಲ. ರಾಜ್ಯ ಸರ್ಕಾರ ಒಂದು ವೇಳೆ ವಿಧೇಯಕ ತಂದರೂ ಕೋರ್ಟ್ನಲ್ಲಿ ಅದು ರದ್ದುಗೊಳ್ಳುವ ಸಾಧ್ಯತೆಯೇ ಹೆಚ್ಚಿದೆ.

ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ

ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!

ಮಕ್ಕಳೇ ಟಾರ್ಗೆಟ್: ಏನಿದು ಚಂಡೀಪುರ ವೈರಸ್?

TAGGED:Will my children not get job in Karnataka? Phonepe CEO Sameer criticized job reservation measures newsics
Share This Article
Facebook Twitter Copy Link Print
Previous Article ಈ ದಂಪತಿಗೆ ಕತ್ರಿನಾ ಕೈಫೇ ದೇವರು, ನಟಿಗೆ ನಿತ್ಯ ಪೂಜೆ!
Next Article ಪಂಚಾಯ್ತಿಯಿಂದಲೇ ದಲಿತ ಕುಟುಂಬಗಳಿಗೆ ಬಹಿಷ್ಕಾರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?