Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಕೆ.ಎಚ್‌. ಮುನಿಯಪ್ಪ ಅಳಿಯನಿಗಾಗಿ ‘ಕಾರ್ಯದರ್ಶಿ – ‘2’ ಹುದ್ದೆ?
ಕರ್ನಾಟಕಪ್ರಮುಖವೈರಲ್

ಸಚಿವ ಕೆ.ಎಚ್‌. ಮುನಿಯಪ್ಪ ಅಳಿಯನಿಗಾಗಿ ‘ಕಾರ್ಯದರ್ಶಿ – ‘2’ ಹುದ್ದೆ?

Share
1 Min Read
SHARE

newsics.com

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ರಾಜ್ಯ ಸರ್ಕಾರ ಇದೀಗ ತನ್ನ ಸಂಪುಟದ ಸಚಿವನ ಅಳಿಯನಿಗಾಗಿಯೇ ನಿಯಮ ಬಾಹಿರವಾಗಿ ಹುದ್ದೆ ಸೃಷ್ಟಿ ಮಾಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಸರ್ಕಾರದ ಈ ಉದ್ಧಟತನದ ತಿರ್ಮಾನದ ವಿರುದ್ಧ ವಿಧಾನಸಭಾ ಸಚಿವಾಲಯದ ಅಧಿಕಾರಿಗಳೇ ಹೋರಾಟಕ್ಕೆ ಇಳಿದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಭಾವಿ ಸಚಿವ, ಕೆಎಚ್‌ ಮುನಿಯಪ್ಪ ಅವರ ಅಳಿಯ ಕೆಸಿ ಶಶಿಧರ್‌ಗೆ ಕಾನೂನು ಬಾಹಿರವಾಗಿ ಕಾರ್ಯದರ್ಶಿ ಹುದ್ದೆ 2 ಅನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸದ್ಯ ವಿಧಾನಸಭಾ ಸಚಿವಾಲಯದಲ್ಲಿ ಗಣಕ ವಿಭಾಗದ ನಿರ್ದೇಶಕರಾಗಿರುವ ಸಚಿವ ಮುನಿಯಪ್ಪ ಅಳಿಯ ಕೆ.ಸಿ.ಶಶಿಧರ್ ಅನ್ನು ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ ೨ ಹುದ್ದೆಗೆ ನಿಯೋಜನೆ ಮಾಡಲು ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಂದಹಾಗೆ ಕೆ.ಸಿ ಶಶಿಧರ್ ಮನವಿಗೆ ಸ್ವಂತ ಮಾವ ಆಗಿರುವ ಸಚಿವ ಮುನಿಯಪ್ಪ ಅವರಿಂದಲೂ ಶಿಫಾರಸ್ಸು ಮಾಡಲಾಗಿದ್ದು, ಶಶಿಧರ್ ಪರವಾಗಿ ಪತ್ನಿಯಾಗಿರುವ ಶಾಸಕಿ ರೂಪಾಕಲಾ ಅವರಿಂದಲೂ ಲಾಭಿ ನಡೆಸಲಾಗಿದೆ. ಆ ಮೂಲಕ ಇಡೀ ಮುನಿಯಪ್ಪ ಕುಟುಂಬವೇ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಾಳಯದ ಲಾಬಿಗೆ ಡಿಪಿಎಆರ್ ಅಧಿಕಾರಿಗಳು ಸಹ ಮಣಿದಿದ್ದು, ನಿರ್ದೇಶಕ ಹುದ್ದೆಯಿಂದ ಕಾರ್ಯದರ್ಶಿ ೨ ಹುದ್ದೆಗೆ ಮೇಲ್ದರ್ಜೆಗೆ ಏರಿಸಲು ಕಡತ ಕೂಡ ಸಿದ್ಧವಾಗಿದೆ ಎಂದು ತಿಳಿದು ಬಂದಿದೆ.

ಡಿಪಿಎಆರ್ ಅಧಿಕಾರಿಗಳು ಸಿದ್ಧಗೊಳಿಸಿರುವ ಕಡತಕ್ಕೆ ವಿಧಾನಸಭಾ ಸಚಿವಾಲಯದಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿರುವ ಸಾಧ್ಯತೆ ಇದ್ದು, ಸಚಿವಾಲಯದ ನಿರ್ಧಾರದಿಂದ ಕಂಗೆಟ್ಟ ವಿಧಾನಸಭೆಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಹೋರಾಟ ಮಾಡುವ ಮೂಲಕ ಸರಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗಣಕ ವಿಭಾಗದ ಅಧಿಕಾರಿಯನ್ನು ಸಚಿವಾಲಯದಲ್ಲಿ ಪರಿಗಣಿಸಬಾರದು ಎಂದು ಆಗ್ರಹಿಸಿದ್ದಾರೆ. ಸಚಿವಾಲಯದ ವಿಭಾಗದ ವೃಂದಗಳಲ್ಲೇ ಹುದ್ದೆ ಸೃಷ್ಟಿಸಿ ನೀಡಬೇಕು ಅಂತ ಒತ್ತಾಯ ಮಾಡಲಾಗಿದ್ದು, ಸಚಿವನ ಅಳಿಯನಿಗಾಗಿ ಹುದ್ದೆ ಸೃಷ್ಟಿ ಮಾಡುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

TAGGED:Minister K.H. 'Secretary – 2' post for Muniyappa's son-in-law?
Share This Article
Facebook Twitter Copy Link Print
Previous Article 32 ಹಲ್ಲುಗಳೊಂದಿಗೆ ಜನಿಸಿದ ಮಗು; ವಿಡಿಯೋ ನೋಡಿ
Next Article ವಾಹನ ಸವಾರರೇ ಎಚ್ಚರ ಎಚ್ಚರ: ಆಗಸ್ಟ್ನಿಂದ ಕಠಿಣ ಕ್ರಮ ಜಾರಿ!

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?