newsics.com
ಚೆನ್ನೈ: ಜನನಿಬಿಡ ಮೆಟ್ರೋದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತೊಂಡಿಯಾರ್ ಪೇಟೆಯ ಭುವನೇಶ್ (24) ಬಂಧಿತ ಆರೋಪಿ. ಭುವನೇಶ್ ಮೆಟ್ರೋದಲ್ಲಿ ಸಾಕಷ್ಟು ಪ್ರಯಣಿಕರ ಮಧ್ಯೆ ಗಾಂಜಾ ಸೇವಿಸಿದ್ದಾನೆ. ಆತ ಗಾಂಜಾ ಸೇವನೆ ಮಾಡುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಬಗ್ಗೆ ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಚಿವ ಡಿ ಜಯಕುಮಾರ್ ಅವರು ವೈರಲ್ ಫೋಟೋದಲ್ಲಿ ಕಾಣಿಸಿಕೊಂಡ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಚೆನ್ನೈ ಪೊಲೀಸರು ಆ ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ ಬಂಧಿತ ಆರೋಪಿಯಿಂದ 1.5 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ತೇನಾಂಪೇಟೆ ಇನ್ಸ್ಪೆಕ್ಟರ್ ಸೆಂಥಿಲ್ ಮುರುಗನ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.