newsics.com
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಖೇಡ್ ತಾಲೂಕಿನಲ್ಲಿ 22 ವರ್ಷದ ಯುವಕನೊಬ್ಬ ತನ್ನನ್ನು ಮದುವೆಯಾಗುವುದಿಲ್ಲ ಎಂದ 21 ವರ್ಷದ ಯುವತಿಯ ಕತ್ತು ಸೀಳಿ, ಆಕೆಯ ಹೊಟ್ಟೆಗೆ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭಯಾನಕ ಕೃತ್ಯಕ್ಕೆ ಪುಣೆ ಬೆಚ್ಚಿಬಿದ್ದಿದೆ. ಕೊಲೆ ಮಾಡಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಯುವಕನನ್ನು 12 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನನಗೆ ಸಿಗದ ಹುಡುಗಿ ಬೇರೆ ಯಾರಿಗೂ ಸಿಗಬಾರದು ಎಂದು ಈ ಕೃತ್ಯ ಎಸಗಿದ್ದಾಗಿ ಆತ ಹೇಳಿದ್ದಾನೆ.
ಮಹಾಲುಂಗೆ ಎಂಐಡಿಸಿ ಪೊಲೀಸ್ ವ್ಯಾಪ್ತಿಯ ಪುಣೆ ನಗರದ ಅಂಬೇಥಾನ್ ಗ್ರಾಮದಲ್ಲಿ ಸಂತ್ರಸ್ತೆಯ ಬಾಡಿಗೆ ನಿವಾಸದ ಬಳಿ ಭಾನುವಾರ (ಜುಲೈ 28) ತಡರಾತ್ರಿ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಪುಣೆ ಗ್ರಾಮಾಂತರ ಪೊಲೀಸರ ಅಪರಾಧ ವಿಭಾಗದ ಘಟಕವು ಪುಣೆಯಲ್ಲಿ 21 ವರ್ಷದ ಪ್ರಾಚಿ ಮಾನೆ ಹತ್ಯೆಗೆ ಸಂಬಂಧಿಸಿದಂತೆ ಅವಿರಾಜ್ ಖಾರತ್ ಎಂಬಾತನನ್ನು ಬಂಧಿಸಿದೆ. ಪಿಂಪ್ರಿ ಚಿಂಚ್ವಾಡ್ನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಖಾರತ್ನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದರು. ಅದೇ ಕಾರಣಕ್ಕೆ ಕೊಲೆ ಮಾಡಲಾಗಿದೆ.