newsics.com
ಬೆಂಗಳೂರು: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗುರುವಾರ (ಆಗಸ್ಟ್ 1) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಅಲ್ಲದೆ, ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಈ ಮೂಲಕ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರು ನೊಟೀಸ್ ಜಾರಿ ಮಾಡಿದ್ದರು.
ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಾಗಿರುವ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಗಿದೆ.
ಮುಡಾ ಹಗರಣದ ಆರೋಪ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮ್ಯಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಚಿಂತನೆ ನಡೆಸಿದ್ದಾರೆ. ಇದಕ್ಕೂ ಮೊದಲು ನೋಟಿಸ್ ನೀಡಿದ್ದಾರೆ.
ಮುಡಾ ಅಕ್ರಮ: ಸಿಎಂಗೆ ರಾಜ್ಯಪಾಲರಿಂದ ನೋಟಿಸ್, ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು