newsics.com
ವಿಜಯಪುರ: ಮಂಗಳಮುಖಿಯರು ಸಾರ್ವಜನಿಕರ ಎದುರಲ್ಲೇ ಯುವತಿ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ.
ತೃತೀಯಲಿಂಗಿಗಳಾದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಬಸವಣ್ಣ ಕ್ಯಾಂಪಿನ ಜಿ.ಹುಲಗೆಮ್ಮ(26), ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಸತಾಳ ಗ್ರಾಮದ ಕವಿತಾ(26), ಯಾದಗಿರಿ ಜಿಲ್ಲೆ ನಾರಾಯಣಪುರದ ಮಹಾನಮ್ಮ(48), ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕು ಕೊಣ್ಣೂರಿನ ಅಶ್ವಿನಿ(23) ಹಾಗೂ ಯಾದಗಿರಿ ಜಿಲ್ಲೆ ಗದ್ದೆಮ್ಮಕಟ್ಟೆಯ ಬಸಮ್ಮ(28) ಎಂಬುವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ತೃತೀಯಲಿಂಗಿ ಪರಾರಿಯಾಗಿದ್ದಾನೆ.
ಬಂಧಿತ ಎಲ್ಲ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್ ಮಹಲ್ ಹೋಟೆಲ್ ಎದುರು ಜೂನ್ 21ರಂದು ಪ್ರಕರಣ ನಡೆದಿತ್ತು. ಸಂತ್ರಸ್ತೆ ತೃತೀಯ ಲಿಂಗಿಗಳ ಜತೆ ಇದ್ದರು. ಕೆಲವು ಭಿನ್ನಾಭಿಪ್ರಾಯದಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಮಣ್ಣಿನಡಿ ಸಿಲುಕಿ ಒದ್ದಾಡಿದ ಶ್ವಾನ: ಕಣ್ಣೀರು ತರಿಸುತ್ತದೆ ಮೂಕಪ್ರಾಣಿ ವೇದನೆ