newsics.com
ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ. ಈ ಹಿನ್ನಲೆ ಅನುಮತಿ ಇಲ್ಲದೆ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಶವ ಬಳಸಿಕೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ಮೂಲಕ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.
ಇನ್ನು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹತಾವುಲ್ಲಾ, ಕಳೆದ 15 ದಿನದಿಂದ ಮನೆಗೆ ಬಂದಿರಲಿಲ್ಲ. ಇತ್ತ ಆತನ ಕುಟುಂಬ ನಾಪತ್ತೆಯಾಗಿದ್ದವನಿಗಾಗಿ ಹುಡುಕಾಟ ನಡೆಸಿದ್ದರು. ಅದರಂತೆ ಜುಲೈ 27 ರಂದು ವಿದ್ಯಾನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಉಣಕಲ್ನ ಸುಭಾನಿ ನಗರದ ಮೃತ ವ್ಯಕ್ತಿ ಹತಾವುಲ್ಲಾ ಖಾನ್ (40) ಪತ್ತೆಯಾಗಿದ್ದ. ಬಳಿಕ ಆತನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಅಂದು ಸಂಜೆಯೇ ಹತಾವುಲ್ಲಾ ಮೃತಪಟ್ಟಿದ್ದ. ಈ ವಿಷಯವನ್ನು ಕಿಮ್ಸ್ ಮತ್ತು ಪೊಲೀಸ್ ಸಿಬ್ಬಂದಿ ಮನೆಯವರಿಗೆ ತಿಳಿಸಿಲ್ಲ.
ಸದ್ಯ ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಕಿಮ್ಸ್ ಅಧಿಕಾರಿಗಳು ಮೃತನ ಕುಟುಂಬಸ್ಥರಿಗೆ ಒತ್ತಡ ಹಾಕುತ್ತಿದ್ದಾರೆ.